ವಿಜಯಪುರ ನಗರದಲ್ಲಿ ಇತ್ತೀಚೆಗೆ ನಿತ್ಯ ಮನೆಗಳ್ಳತನ, ಸುಲಿಗೆ ಪ್ರಕರಣಗಳು ಮೀತಿ ಮೀರಿದ್ದು, ಇದರಿಂದ ಜನರು ಆತಂಕದಲ್ಲಿ ಜೀವನ ಸಾಗಿಸುವ ಸ್ಥಿತಿ ಬಂದಿದೆ. ಅದು ಹೋಗಲಾಡಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದರು.
ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕ್ಷುಲ್ಲಕ ಕಾರಣಕ್ಕೋಸ್ಕರ ಪ್ರತಿಷ್ಠಿತ ಅರಿವೇ ಗುರು ಪ್ರಶಸ್ತಿ ಕಾರ್ಯಕ್ರಮ ಮುಂದೂಡಿದ್ದಲ್ಲದೇ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ। ಚಂದ್ರಶೇಖರ ಕಂಬಾರ ಸೇರಿ ಮೂವರು ಪ್ರಶಸ್ತಿ ಪುರಸ್ಕೃತರಿಗೆ ಅಗೌರವ ತೋರಿರುವ ಘಟನೆ ನಡೆದಿದೆ.