ವಿಜಯಪುರ ನಗರದಲ್ಲಿ ಇತ್ತೀಚೆಗೆ ನಿತ್ಯ ಮನೆಗಳ್ಳತನ, ಸುಲಿಗೆ ಪ್ರಕರಣಗಳು ಮೀತಿ ಮೀರಿದ್ದು, ಇದರಿಂದ ಜನರು ಆತಂಕದಲ್ಲಿ ಜೀವನ ಸಾಗಿಸುವ ಸ್ಥಿತಿ ಬಂದಿದೆ. ಅದು ಹೋಗಲಾಡಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದರು.