ಹಿಂಸಾಚಾರಕ್ಕೆ ನಲುಗಿರುವ ಬಾಂಗ್ಲಾದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದೆ. ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ಸರ್ಕಾರದ ಮುಖ್ಯ ಸಲಹೆಗಾರ (ಪ್ರಧಾನಿ)ರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸದಾಶಿವನಗರದಲ್ಲಿ ವಿಧವೆಯರ ನಿವೇಶನವನ್ನು ಗನ್ನಿಟ್ಟು ಹೆದರಿಸಿ ರಿಜಿಸ್ಟರ್ ಮಾಡಿಸಿಕೊಂಡ ಅವರು, ಚಾಮುಂಡೇಶ್ವರಿ ಅಥವಾ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಮತ್ತೆ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.
ಮಿಸ್ಟರ್ ಡಿ.ಕೆ.ಶಿವಕುಮಾರ್ ನಿಮಗೆ ನೊಣವಿನಕೆರೆ ಅಜ್ಜಯ್ಯ ಅವರ ಮೇಲೆ ಭಕ್ತಿ, ಗೌರವ ಇದ್ದರೆ ಯಾವುದೇ ಅಕ್ರಮ ಮಾಡಿಲ್ಲ ಎಂದು ಪ್ರಮಾಣ ಮಾಡಿ, ನಾನು ಪ್ರಮಾಣ ಮಾಡಲು ಸಿದ್ಧನಿದ್ದೇನೆ