ಎಂಥ ಪ್ರವಾಹ ಬಂದರು ಎದುರಿಸಲು ಸಿದ್ಧ: ತಿಮ್ಮಾಪುರ
Jul 28 2024, 02:00 AM ISTಕನ್ನಡಪ್ರಭ ವಾರ್ತೆ ಜಮಖಂಡಿ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ತಿಳಿಸಿದ್ದಾರೆ. ಎಂತಹದೇ ಪ್ರವಾಹ ಪರಿಸ್ಥಿತಿ ಉಂಟಾದರೂ ಸರ್ಕಾರ ಹಿಂದೆ ಸರಿಯಲ್ಲ, ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ, ಅಧಿಕಾರಿಗಳು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ವಿವರಿಸಿದರು.