ಭೀಕರ ಪ್ರವಾಹದ ಹಿನ್ನೆಲೆಯಲ್ಲಿ ತಾಲೂಕಿನ ಆರು ಗ್ರಾಮಗಳನ್ನು ನೀರು ಸುತ್ತುವರಿದು ಜಲಾವೃತಗೊಂಡ ಹಿನ್ನೆಲೆಯಲ್ಲಿ ಜನ ಹಾಗೂ ಜಾನುವಾರುಗಳನ್ನು ರಕ್ಷಣೆ ಮಾಡುವ ಕಾರ್ಯವನ್ನು ಜಿಲ್ಲಾಡಳಿತ ನಿರ್ವಹಿಸುತ್ತಿದ್ದು ಮುಂದೆ ಯಾವುದೇ ರೀತಿ ಅನಾಹುತ ಸಂಭವಿಸಿದಂತೆ ಹೈ ಅಲರ್ಟ್ ಆಗಿದೆ.
ನಂಜನಗೂಡು ತಾಲೂಕಿನ ಮಲ್ಲನಮೂಲೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ 3 ಅಡಿಗೂ ಹೆಚ್ಚಿನ ನೀರು ತುಂಬಿಕೊಂಡ ಪರಿಣಾಮ 766 ರ ಊಟಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ