₹15 ಕೋಟಿಯ ಜಾಗ ಮಂಜೂರು ರದ್ದುಪಡಿಸಿ: ಬಿಜೆಪಿ ಒತ್ತಾಯ
Aug 04 2025, 11:45 PM ISTಖಾಸಗಿ ಕಂಪನಿ ಹೆಸರಿನಲ್ಲಿ ಘನತ್ಯಾಜ್ಯ ಸಂಗ್ರಹಣೆ ಮತ್ತು ನಿರ್ವಹಣೆ ಘಟಕ ಸ್ಥಾಪಿಸಲೆಂದು ಕರೂರು ಕೈಗಾರಿಕಾ ಪ್ರದೇಶದಲ್ಲಿ ಜಿಲ್ಲಾ ಸಚಿವರು ನಿಯಮಬಾಹಿರವಾಗಿ ₹15 ಕೋಟಿ ಮೌಲ್ಯದ 1.5 ಎಕರೆ ಜಾಗ ಮಂಜೂರು ಮಾಡಿಸಿಕೊಂಡಿದ್ದಾರೆ. 1.5 ಎಕರೆ ಜಾಗ ಮಂಜೂರು ರದ್ದುಪಡಿಸದಿದ್ದರೆ ಆ.11ರಿಂದ ಆರಂಭವಾಗುವ ವಿಧಾನಸಭೆ ಅಧಿವೇಶದಲ್ಲಿ ವಿಷಯ ಮಂಡಿಸಿ, ಬಿಜೆಪಿ ಬೀದಿಗಿಳಿದು ಹೋರಾಡುವ ಜೊತೆಗೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಪಕ್ಷದ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ಎಚ್ಚರಿಸಿದ್ದಾರೆ.