ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ಹಾಗೂ ಅರ್ಎಸ್ಎಸ್ ಮುಖಂಡರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸುಳ್ಳು ಆರೋಪ ಮಾಡುತ್ತಾ ಖರ್ಗೆ ಕುಟುಂಬಕ್ಕೆ ಕಳಂಕ ಹಚ್ಚುವ ಹಾಗೂ ರಾಜಕೀಯ ಜೀವನಕ್ಕೆ ಮಸಿ ಬಳಿಯುವ ವ್ಯವಸ್ಥಿತ ಸಂಚು ರೂಪಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಆರೋಪ
ಕಲಬುರಗಿಯ ಕಂಟ್ರಾಕ್ಟರ್ ಸಚಿನ್ ಪಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದಲೂ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್.ರವಿ.ಕುಮಾರ್ ಆಗ್ರಹಿಸಿದ್ದಾರೆ.
ಒಳ ಒಪ್ಪಂದ ಮಾಡಿಕೊಂಡ ಬಿಜೆಪಿ ನಾಯಕರ ಹೆಸರು ಬಹಿರಂಗಪಡಿಸಲು ಯಶವಂತರಾವ್ ಜಾಧವ್ ಪ್ರಶ್ನಿಸಿದರೆ, ಅದಕ್ಕೆ ಕುಂಬಳ ಕಾಯಿ ಕಳ್ಳ ಅಂದ್ರೆ ಕೆಲವರು ಹೆಗಲು ಮುಟ್ಟಿ ನೋಡಿಕೊಳ್ಳುವುದು ಏಕೆ ಎಂದು ಬಿಜೆಪಿ ಮುಖಂಡ, ವಕೀಲ ಜಿ.ಮಂಜುನಾಯ್ಕ ಪ್ರಶ್ನಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಜನವರಿ 4ರಂದು ವಕ್ಫ್ ಹೋರಾಟಕ್ಕಾಗಿ ಸಮಾವೇಶ ನಡೆಸಲಾಗುವುದು. ಹೈಕಮಾಂಡ್ ನಮಗೆ ಯಾವುದೇ ರೀತಿ ಕಡಿವಾಣ ಹಾಕಿಲ್ಲ. ಇಲ್ಲದಿದ್ದರೆ ನಾವು ಮಾಧ್ಯಮದ ಎದುರು ಬಂದು ಎರಡನೇ ಹಂತದ ಹೋರಾಟಕ್ಕಾಗಿ ಹೇಳಿಕೆ ನೀಡುತ್ತಿರಲಿಲ್ಲ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ಹೇಳಿದರು.
ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಟ್ಟಹಾಸ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಆತ್ಮಹತ್ಯೆ ಘಟನೆ ಕುರಿತು ಉನ್ನತಮಟ್ಟದ ತನಿಖೆ ಆಗಬೇಕು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಸದರಿ ಪ್ರಕರಣದಲ್ಲಿ ಸಚಿನ್ ಬರೆದಿಟ್ಟಿರುವ ಡೆತ್ ನೋಟ್ನಲ್ಲಿ ಬಿಜೆಪಿಯ ಹಲವು ಮುಖಂಡರ ಕೊಲೆಗೆ ಸಂಚು ರೂಪಿಸಲಾಗಿತ್ತೆಂಬ ಸಂಗತಿಯೂ ವಿವಾದದ ಬಿರುಗಾಳಿ ಹುಟ್ಟಿಸಿದೆ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರದ ಸ್ಥಳ ಮತ್ತು ಅವರ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ವಿಷಯವು ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಭಾರೀ ಜಟಾಪಟಿಗೆ ಕಾರಣವಾಗಿದೆ.
ಡಿಎಂಕೆ ಸರ್ಕಾರದ ಆಡಳಿತ ವೈಖರಿ ವಿರೋಧಿಸಿ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ತಮಗೆ ತಾವೇ ಚಾಟಿಯಿಂದ ಹೊಡೆದುಕೊಂಡು ಶುಕ್ರವಾರ ಪ್ರತಿಭಟಿಸಿದ್ದಾರೆ.