ಬಿಜೆಪಿ ಜೆಡಿಎಸ್ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ದ ಜನರಲ್ಲಿ ತಪ್ಪು ಕಲ್ಪನೆ ಮೂಡಲಿ ಎಂದು ರೈತರ ಮಠ,ಮಂದಿರಗಳ ಆಸ್ತಿಯನ್ನು ವಕ್ಫ್ ಬೋರ್ಡ್ ಹೆಸರಿಗೆ ಬದಲಾಯಿಸಿಕೊಂಡು ರೈತರನ್ನು ವಂಚನೆ ಮಾಡುತ್ತಿದೆ ಎಂದು ಆರೋಪ ಮಾಡುತ್ತಿದೆ
ಲಗಾಯ್ತಿನಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿರುವ ಗಣಿನಾಡು ಸಂಡೂರಲ್ಲಿ ಉಪ ಚುನಾವಣಾ ಕಣ ರಂಗೇರಿದೆ. ಬಿರುಸಿನ ಪ್ರಚಾರದ ಭರಾಟೆಯಿಂದಾಗಿ ಈ ಕ್ಷೇತ್ರ ದಿನೇ ದಿನೇ ಜಿದ್ದಾಜಿದ್ದಿಯ ಅಖಾಡವಾಗಿ ಬದಲಾಗುತ್ತಿದೆ.
ಶ್ರೀ ವನದುರ್ಗಿ ದೇವಾಲಯದ ಆಸ್ತಿಯನ್ನು ವಕ್ಫ್ ಬೋರ್ಡ್ನಿಂದ ದೇವಾಲಯದ ಹೆಸರಿಗೆ ಕಂದಾಯ ಇಲಾಖೆ ಮಾಡಿಕೊಡಬೇಕು. ತಪ್ಪಿದಲ್ಲಿ ಬಿಜೆಪಿ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಕೃಷಿಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್ಚಂದ್ರ ಎಚ್ಚರಿಸಿದ್ದಾರೆ.
ಬೆಳಗಾವಿ ತಹಸೀಲ್ದಾರ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವನ್ನವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಲಕ್ಷ್ಮೀ ಹೆಬ್ಬಾಳಕರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಹೋದಲ್ಲಿ ಬಂದಲ್ಲಿ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುತ್ತಾರೆ. ಅವರಿಗೆ ತಾಕತ್ತಿದ್ದರೆ, ಅವರ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತೇವೆ ಎಂದು ಘೋಷಣೆ ಮಾಡಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಸವಾಲು ಹಾಕಿದರು.