ಆಪರೇಷನ್ ಕಮಲದ ಮೂಲಕ ಸರ್ಕಾರ ಬೀಳಿಸಲು ವಿಫಲರಾದ ಹಿನ್ನೆಲೆಯಲ್ಲಿ ಇದೀಗ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಅದು ಯಾವತ್ತೂ ಯಶಸ್ವಿಯಾಗುವುದಿಲ್ಲ. ಇವರ ಸುಳ್ಳುಗಳಿಗೆ ನಾನು ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಸಾಗಿದ ಪಾದಯಾತ್ರೆಗೆ ಭಾರೀ ಜನಬೆಂಬಲ ವ್ಯಕ್ತವಾಯಿತು. ಮಧ್ಯಾಹ್ನದ ವೇಳೆಗೆ ನಗರದ ಸಕ್ಕರೆ ವೃತ್ತದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಪಾದಯಾತ್ರೆಗೆ ಸೇರ್ಪಡೆಯಾದರು.