ಶ್ರೀರಾಮನನ್ನು ಬೀದಿಗೆ ತಂದು ನಿಲ್ಲಿಸಿದ್ದು ಬಿಜೆಪಿ: ಸಚಿವ ಮಧು ವಾಗ್ದಾಳಿ

Jan 30 2024, 02:03 AM IST
ರಾಜ್ಯ ಸರ್ಕಾರಕ್ಕೆ ರಾಮನ ಶಾಪ ತಟ್ಟುತ್ತದೆ ಎಂದು ಆರ್.ಅಶೋಕ್ ಹೇಳಿದ್ದಾರೆ. ಯಾವ ರಾಮನದು? ಅಯೋಧ್ಯೆಯ ರಾಮನಾ? ಪ್ರತಿ ಊರಲ್ಲಿ ರಾಮನಿದ್ದಾನೆ. ಅವರೇನು ರಾಮನನ್ನು ಅಡವಿಟ್ಟು ಕೊಂಡಿದ್ದಾರಾ? ರಾಷ್ಟ್ರಧ್ವಜಕ್ಕೆ ಗೌರವ ಕೊಡುವುದು ನಮ್ಮ ಕರ್ತವ್ಯ. ಇದರಲ್ಲಿ ಬಿಜೆಪಿಯವರು ರಾಜಕೀಯ ಮಾಡುವುದು ಸರಿಯಲ್ಲ. ನನ್ನ ಪ್ರಕಾರ ಆರ್‌.ಅಶೋಕ್ ಅವರು ಹಿಂದು ವಿರೋಧಿ. ರಾಮನನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ. ರಾಮನನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಇಷ್ಟು ದಿನ ರಾಮ ಮತ್ತು ಅಯೋಧ್ಯೆಯ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.