ವಿಜಯೇಂದ್ರಗೆ ಬಿಜೆಪಿ ಸಂಘಟಿಸುವ ಶಕ್ತಿಯಿದೆ: ಸಂಸದ ರಾಘವೇಂದ್ರ

Nov 30 2023, 01:15 AM IST
ಕೇಂದ್ರ ಸರ್ಕಾರ ಅನೇಕ ಜನಪರ ಕಾರ್ಯಕ್ರಮ ನೀಡಿದೆ. ಅವುಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಕೇಂದ್ರ ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು. ನಮ್ಮ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗುತ್ತಿದೆ. ನಮ್ಮ ಮುಂದಿನ ಯುವಪೀಳಿಗೆಗೆ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ. ಮುಂದೆ ಯಡಿಯೂರಪ್ಪ ಅವರ ಆಸೆಯಂತೆ ಯುವಕರಿಗೆ ಉದ್ಯೋಗ ಸಿಗಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ಮುಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಯಶಸ್ವಿಯಾಗಬೇಕಿದೆ. ಮೊನ್ನೆಯಾದ ಸೋಲನ್ನು ಸುಳ್ಳು ಎಂಬುವುದನ್ನು ತೋರಿಸಬೇಕಿದೆ ಎಂದು ಕರೆ ನೀಡಿದರು.