ಜೆಡಿಎಸ್ ಪ್ರತಿಭಟನೆಯಲ್ಲಿ ಬಿಜೆಪಿ ಧ್ವಜ ಬಳಕೆ

Oct 09 2025, 02:00 AM IST
ಅರಸೀಕೆರೆ ತಾಲೂಕಿನಲ್ಲಿ ಮಂಗಳವಾರ ನಡೆದ ಜೆಡಿಎಸ್ ಪಕ್ಷದ ಪ್ರತಿಭಟನೆಯಲ್ಲಿ ಬಿಜೆಪಿ ಧ್ವಜ ಮತ್ತು ಟೋಪಿಯನ್ನು ಬಳಸಿರುವ ಘಟನೆಗೆ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ಯತೀಶ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಗರ ಮಂಡಲ ಅಧ್ಯಕ್ಷ ಅವಿನಾಶ್ ನಾಯ್ಡು ಮಾತನಾಡಿ, ಸಂತೋಷ್ ಅವರ ಜೊತೆ ತಿರುಗಾಡುವ ಗಿರೀಶ್, ಶಿವನ್‌ ರಾಜ್ ಮುಂತಾದವರಿಗೆ ಈಗಾಗಲೇ ನೋಟಿಸ್‌ಗಳನ್ನು ಕಳುಹಿಸಲಾಗಿದೆ. ಮುಂದೆ ಯಾರೇ ಅವರ ಜೊತೆ ಭಾಗವಹಿಸಿದರೂ ಪಕ್ಷ ವಿರೋಧಿ ಕ್ರಮ ಕೈಗೊಳ್ಳಲಾಗುತ್ತದೆ. ಜೆಡಿಎಸ್‌ ಅವರಿಗೆ ತಮ್ಮ ಬೆಂಬಲ ಸಾಕಾಗದೇ, ನಮ್ಮ ಬಿಜೆಪಿ ಬಾವುಟವನ್ನು ಬಳಸಿ ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ ಭಾಗವಹಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.