ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಅಭ್ಯರ್ಥಿ ಕಣಕ್ಕಿಳಿಸುವ ಸಂಬಂಧ ಶೀಘ್ರ ದೆಹಲಿಗೆ ತೆರಳಿ ಸಂಸದರು, ಕೇಂದ್ರ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಣದ ನಾಯಕರು ತೀರ್ಮಾನಿಸಿದ್ದಾರೆ.
ಎಲ್ಲಾ ಹಿರಿಯ ಮುಖಂಡರಿಗೂ ತಿಳಿಸಿ, ಅಧ್ಯಕ್ಷರ ಘೋಷಣೆ ಮಾಡಬೇಕಿತ್ತು, ಆದರೆ ರಾಜ್ಯಾಧ್ಯಕ್ಷ ವಿಜಯೇಂದ್ರ ತಮ್ಮ ಬೆಂಬಲಿಗಾರದ ತಮ್ಮೇಶ್ ಗೌಡರ ಅಣತಿಯಂತೆ ಜಿಲ್ಲಾಧ್ಯಕ್ಷರ ಆಯ್ಕೆಯನ್ನು ಏಕಾಪಕ್ಷೀಯವಾಗಿ ಘೋಷಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.
ಬಿಜೆಪಿ ನೂತನ ಜಿಲ್ಲಾ ಅಧ್ಯಕ್ಷರನ್ನು ಪಕ್ಷದ ರಾಜ್ಯ-ಕೇಂದ್ರದ ವರಿಷ್ಠರು ನೇಮಕ ಮಾಡಿದ್ದು ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿರಬೇಕು ಎಲ್ಲೂ ಸಹ ಏಕಪಕ್ಷೀಯ ತೀರ್ಮಾನ ನಡೆದಿಲ್ಲ, ಚುನಾವಣಾ ಪ್ರಕ್ರಿಯೆಗಳ ಮೂಲಕವೇ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು
ಒಂದು ಕಾಲು ಹೊರಗಿರಿಸಿ ರಾಜಕೀಯ ಮಾಡುತ್ತಿದ್ದೀಯ. ತಾಕತ್ ಇದ್ದರೆ ಬಿಜೆಪಿ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧಿಸಿ ಗೆದ್ದು ತೋರಿಸು’ ಎಂದು ಚಿಕ್ಕಬಳ್ಳಾಪುರದ ಸಂಸದ ಡಾ.ಕೆ.ಸುಧಾಕರ್ ಅವರ ವಿರುದ್ಧ ವಿಶ್ವನಾಥ್ ಅಬ್ಬರಿಸಿದ್ದಾರೆ.
ರಾಜ್ಯ ಬಿಜೆಪಿಯ 39 ಸಂಘಟನಾತ್ಮಕ ಜಿಲ್ಲೆಗಳ ಪೈಕಿ 23 ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಅಧಿಕೃತವಾಗಿ ನೇಮಿಸಲಾಗಿದೆ.
ವಿಐಎಸ್ಎಲ್ ಕಾರ್ಖಾನೆಯನ್ನು ಕೋಮಸ್ಥಿತಿಗೆ ತಂದಿದ್ದು ಅಲ್ಲದೇ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಇನ್ನೂ ಜೀವಂತವಾಗಿರುವುದಕ್ಕೇ ಕಾರಣವೇ ಬಿಜೆಪಿ ಸರ್ಕಾರ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ತಿರುಗೇಟು ನೀಡಿದರು.