ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆ ಕಲ್ಪಿಸಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ದ ಒತ್ತಡ ಕಡಿಮೆ ಮಾಡಲು ಉದ್ದೇಶಿತ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸುವಂತೆ ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಜನಪ್ರತಿನಿಧಿಗಳು ಮನವಿ ಮಾಡಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದೊಂದು ಎಂಟ್ಹತ್ತು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶ, ರಾಜಕಾಲುವೆ ಹಾಗೂ ಕೆರೆ ಆಸುಪಾಸಿನಲ್ಲಿರುವ ಹಲವು ಬಡಾವಣೆಗಳು ಜಲಾವೃತಗೊಂಡಿವೆ. ಇದರಿಂದ ಆ ಭಾಗದಲ್ಲಿ ಸಾಂಕ್ರಾಮಿಕ ರೋಗಗಳು ಸ್ಫೋಟಗೊಳ್ಳುವ ಆತಂಕ ಎದುರಾಗಿದೆ.
ರಾಜಧಾನಿ ಬೆಂಗಳೂರು, ಹಾವೇರಿ, ಕೊಪ್ಪಳ, ದಾವಣಗೆರೆ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸುತ್ತಿದೆ.