ಬೆಂಗಳೂರು-ಮಂಗಳೂರು ಮಾರ್ಗದ ಎಡಕುಮೇರಿ ಮತ್ತು ಕಡಗರವಳ್ಳಿ ಬಳಿ ಭೂಕುಸಿತ ಸ್ಥಳದಲ್ಲಿ ರೈಲ್ವೆ ಹಳಿ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ. 15 ಕಿ.ಮೀ. ವೇಗದಲ್ಲಿ ಗೂಡ್ಸ್ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಖಾಲಿ ಗೂಡ್ಸ್ ರೈಲುಗಳ ಮೂಲಕ ಪ್ರಾಯೋಗಿಕ ತಪಾಸಣೆ ನಡೆಸಲಾಗಿದೆ.