ಮಂಡ್ಯದಲ್ಲಿ ಡಿ.20ರಿಂದ ಮೂರು ದಿನ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಪಟ್ಟಕ್ಕೆ ಕನ್ನಡ ಪುಸ್ತಕ ಬರೆಯುವ ಮಠಾಧೀಶರು, ಸಿನಿಮಾ ಸಾಹಿತಿಗಳು ಸೇರಿದಂತೆ ಕನ್ನಡದ ಅಭಿವೃದ್ಧಿಯಲ್ಲಿ ಕೈಜೋಡಿಸಿರುವ ಇತರೆ ಕ್ಷೇತ್ರಗಳ ಸಾಧಕರನ್ನು ಪರಿಗಣಿಸಬೇಕೆಂಬ ಕೂಗು ಕೇಳಿಬಂದಿದೆ.
ಹಿಂದೆಲ್ಲಾ ಶ್ರಮದಾನದ ಮೂಲಕ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದರು. ಒಳ್ಳೆಯ ಆಹಾರ ತೆಗೆದುಕೊಳ್ಳುತ್ತಿದ್ದರು. ಅಂದು ಪಟೇಲರು, ಶ್ಯಾನುಬೋಗರು ಸೇರಿದಂತೆ ಸಿರಿವಂತರು ಮಾತ್ರ ಕಾಯಿಲೆ ಎನ್ನುತ್ತಿದ್ದರು. ಆದರೆ, ಇಂದು ಬಡವರು, ಕೂಲಿ ಕಾರ್ಮಿಕರಿಗೂ ಈ ರೋಗ ಬರುತ್ತಿದೆ.