ಕೋಮುಲ್ನಲ್ಲಿ ನಡೆದಿರುವ ಭ್ರಷ್ಟಾಚಾರ ಬಗ್ಗೆ ನನ್ನ ಬಳಿ ಎಲ್ಲ ದಾಖಲೆಗಳು ಇವೆ, ಯಾವುದೇ ಅಧಿಕಾರಿಗಳಾಗಲಿ, ಸಚಿವರಾಗಲಿ ಅಥವಾ ಮಾಧ್ಯಮಗಳ , ಮುಂದೆ ಮುಖಾಮುಖಿ ಕುಳಿತು ಅಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ವಿವರಿಸುವೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.
ಗುತ್ತಿಗೆದಾರರ ಸಂಘ, ಪೂರಕ ದಾಖಲೆ ನೀಡಲು ವಿಫಲವಾಗಿದೆ. ಹೀಗಾಗಿ ಶೇ.40ರಷ್ಟು ಕಮಿಷನ್ ಆರೋಪ ಖಚಿತ ಎಂಬ ಅಭಿಪ್ರಾಯ ತಳೆಯುವುದು ಆಯೋಗಕ್ಕೆ ಕಷ್ಟವಾಗಿದೆ ಎಂದು ನ್ಯಾ. ಎಚ್.ಎನ್.ನಾಗಮೋಹನ್ದಾಸ್ ಆಯೋಗ ತನ್ನ ವರದಿಯಲ್ಲಿ ಸ್ಪಷ್ಟಪಡಿಸಿದೆ.