ಮಳೆ ಹಾನಿ ಪರಿಹಾರ ತ್ವರಿತಗತಿಯಲ್ಲಿ ಪರಿಹರಿಸಿ
May 22 2025, 11:45 PM ISTಮಾಗಡಿ: ತಾಲೂಕಿನಲ್ಲಿ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಹಾನಿ ಕುರಿತು ಯಾವುದೇ ದೂರು ಬಂದರು ಕೂಡಲೇ ಸ್ಪಂದಿಸಿ ಮಳೆ ಹಾನಿ ಪ್ರದೇಶಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸಿ ತ್ವರಿತಗತಿಯಲ್ಲಿ ಪರಿಹರಿಸಲು ಮುಂದಾಗಬೇಕು, ನಿರ್ಲಕ್ಷ್ಯ ತೋರಿದರೆ ಅಂತಹ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ತಹಸೀಲ್ದಾರ್ ಶರತ್ ಕುಮಾರ್ಗೆ ಶಾಸಕ ಎಚ್.ಸಿ.ಬಾಲಕೃಷ್ಣ ಸೂಚಿಸಿದರು.