• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರಿ ಮಳೆ ಹಿನ್ನೆಲೆ ಪ್ರವಾಹ ಭೀತಿಯಲ್ಲಿ ಕೊಳ್ಳೇಗಾಲದ ನದಿ ಪಾತ್ರದ ಗ್ರಾಮಗಳು

Jul 27 2024, 12:53 AM IST
ಕಾವೇರಿ ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಕೊಳ್ಳೇಗಾಲ ತಾಲೂಕಿನ ನದಿ ತೀರದ ಗ್ರಾಮಗಳು ಪ್ರವಾಹದ ಭೀತಿ ಎದುರಿಸುವಂತಾಗಿದೆ.

ತರೀಕೆರೆಯಲ್ಲಿ ಧಾರಾಕಾರ ಮಳೆ: 5 ಮನೆಗಳಿಗೆ ಹಾನಿ

Jul 27 2024, 12:51 AM IST
ತರೀಕೆರೆ, ಪಟ್ಟಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಗಾಳಿ ಇಂದು ಕೂಡ ಮುಂದುವರಿದ ಪರಿಣಾಮ ತಾಲೂಕಿನಲ್ಲಿ ಹಲವೆಡೆ ಮನೆಗಳಿಗೆ ಹಾನಿ, ತಂತಿ ಮೇಲೆ ಮರ ಬಿದ್ದು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.

ಭಾರೀ ಮಳೆ ಮೈದುಂಬಿ ಉಕ್ಕಿ ಹರಿಯುತ್ತಿರುವ ಹೇಮಾವತಿ ನದಿ

Jul 27 2024, 12:50 AM IST
ಹಾಸನದ ಗೊರೂರು ಅಣೆಕಟ್ಟೆಯಿಂದ ಸುಮಾರು 70 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದ ಹೊರ ಹರಿವಿನ ಪ್ರಮಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಹೇಮಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿ ದಂಡೆಯ ಕೆಲವು ಜಮೀನುಗಳಿಗೆ ನೀರು ನುಗ್ಗಿದ್ದರೂ ಬೆಳೆ ಹಾನಿ ವರದಿಯಾಗಿಲ್ಲ.

ಶನಿವಾರಸಂತೆ ಹೋಬಳಿಯಲ್ಲಿ ವ್ಯಾಪಕ ಮಳೆ: ಮರ ಉರುಳಿ ಹಾನಿ

Jul 27 2024, 12:50 AM IST
ಶನಿವಾರಸಂತೆ ಹೋಬಳಿ ವ್ಯಾಪ್ತಿಯಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುತ್ತಿದ್ದು ವ್ಯಾಪಕ ಹಾನಿಯಾಗಿದೆ.ಶುಕ್ರವಾರ ಬೆಳಗ್ಗೆ ಶನಿವಾರಸಂತೆ-ಕುಶಾಲನಗರ ಹೆದ್ದಾರಿಯ ಮಾಲಂಬಿ-ಕಣಿವೆಬಸವನಹಳ್ಳಿ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ರಸ್ತೆ ಸಮಿಪದ ಬೃಹತ್ ಗಾತ್ರದ ಮರವೊಂದು ಬುಡ ಸಮೇತ ರಸ್ತೆಗೆ ಅಡ್ಡಲಾಗಿ ಬಿದ್ದುಸಂಚಾರಕ್ಕೆ ಅಡ್ಡಿ ಆಯಿತು.

ಭಾರಿ ಮಳೆ, ಮತ್ತೆ ಪ್ರವಾಹ: ಇಂದೂ ಶಾಲೆಗೆ ರಜೆ

Jul 27 2024, 12:49 AM IST
ಕೊಡಗು ಜಿಲ್ಲೆಯಾದ್ಯಂತ ಭಾರಿ ಗಾಳಿಯೊಂದಿಗೆ ಮತ್ತೆ ಮಳೆ ಆರ್ಭಟ ಹೆಚ್ಚಾಗಿದ್ದು, ಹಲವು ಕಡೆಗಳಲ್ಲಿ ಮರ ಬಿದ್ದು ಹಾನಿಯಾಗಿವೆ. ಮತ್ತೆ ಕೆಲವೆಡೆ ಮನೆಗಳಿಗೆ ಅಪಾರ ಹಾನಿಯಾಗಿದೆ. ಭಾರಿ ಗಾಳಿ ಮಳೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶನಿವಾರವೂ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.

ಮಳೆ ನಡುವೆ ಕಾಡಾನೆಗಳ ಉಪಟಳ

Jul 27 2024, 12:47 AM IST
ಬೇಲೂರು ತಾಲೂಕಿನಲ್ಲಿ ವಿಪರೀತ ಮಳೆಯ ನಡುವೆ ಅರೇಹಳ್ಳಿ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದ್ದು, ಕಾಡಾನೆಗಳ ಗುಂಪು ಗ್ರಾಮದ ಚಂದ್ರವತಿ, ಶಂಕರ, ಸಂಕಪ್ಪ, ಸಂತೋಷ್ ಶೆಟ್ಟಿರವರ ಜಮೀನಿಗೆ ಲಗ್ಗೆ ಇಟ್ಟು ಬೆಳೆ ಹಾನಿ ಮಾಡಿದೆ, ಇದರಿಂದ ಬೇಸೆತ್ತ ಚಂದ್ರವತಿಯವರು ಕಾಡಾನೆಗಳ ಹಾವಳಿಯಿಂದ ನಿಯಂತ್ರಿಸಿಕೊಳ್ಳಲು ತಾನು ಬೆಳೆದಿದ್ದ ಬಾಳೆ ಗಿಡಗಳನ್ನು ಸ್ವತಃ ತಾನೇ ಕಡಿದು ಹಾಕಿದ್ದಾರೆ.

ಮತ್ತಷ್ಟು ಚುರುಕಾದ ಮಳೆ: ಇಂದೂ ಶಾಲಾ ಕಾಲೇಜಿಗೆ ರಜೆ

Jul 27 2024, 12:47 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಶುಕ್ರವಾರವೂ ಮಳೆಯ ಅಬ್ಬರ ಜೋರಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಶನಿವಾರವೂ ಮಲೆನಾಡಿನ 6 ತಾಲೂಕುಗಳ ಅಂಗನವಾಡಿ, ಶಾಲೆ ಮತ್ತು ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

ಬಂಟ್ವಾಳದಲ್ಲಿ ಮುಂದುವರಿದ ಮಳೆ ಹಾನಿ, ಅಪಾರ ನಷ್ಟ

Jul 27 2024, 12:45 AM IST
ತಾಲೂಕಿನ ಹಲವು ಕೃಷಿಕರ ತೋಟಗಳಲ್ಲಿ ಭಾರೀ ಗಾಳಿಮಳೆಯಿಂದ ಅಡಕೆ ಮರಗಳಿಗೆ ಹಾನಿಯಾಗಿದೆ.

ಶಿವಮೊಗ್ಗದಲ್ಲಿ ಕಳೆದ ನಾಲ್ಕು ದಿನಗಳಿಂದ ತಗ್ಗಿದ ಮಳೆ ಮತ್ತೆ ಚುರುಕು : ಅಲ್ಲಲ್ಲಿ ಹಾನಿ

Jul 26 2024, 01:48 AM IST
ಶಿವಮೊಗ್ಗದಲ್ಲಿ ಕಳೆದ ನಾಲ್ಕು ದಿನಗಳಿಂದ ತಗ್ಗಿದ ಮಳೆ ಗುರುವಾರ ಮತ್ತೆ ಚುರುಕುಕೊಂಡಿದೆ. ಗಾಳಿ-ಮಳೆಗೆ ಅಲ್ಲಲ್ಲಿ ಹಾನಿ ಸಂಭವಿಸಿದೆ.

ಬಂಟ್ವಾಳದಲ್ಲಿ ಮುಂದುವರಿದ ಬಿರುಗಾಳಿ - ಮುಂಗಾರು ಮಳೆ ಆರ್ಭಟ: ಅಪಾರ ಪ್ರಮಾಣದ ಹಾನಿ

Jul 26 2024, 01:46 AM IST
ಮಾಣಿ, ನೇರಳಕಟ್ಟೆ, ಅನಂತಾಡಿ. ಕಡೇಶ್ವಾಲ್ಯದಲ್ಲಿ ಬುಧವಾರ ರಾತ್ರಿ ಬೀಸಿದ ಬಿರುಗಾಳಿಗೆ ಮರಗಳು ಬಿದ್ದು, ಹಲವು ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved