• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇರಳದಲ್ಲಿ ಭಾರಿ ಮಳೆ: 7 ಜಿಲ್ಲೆಗಳ ಶಾಲೆ-ಕಾಲೇಜಿಗೆ ರಜೆ

Jul 16 2024, 11:22 AM IST

ಕೇರಳದ ಹಲವು ಕಡೆಗಳಲ್ಲಿ ಗಾಳಿ ಸಹಿತ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 7 ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿತ್ತು. ತ್ರಿಶೂರ್, ಮಲಪ್ಪುರಂ, ಕಲ್ಲಿಕೋಟೆ, ಕಣ್ಣೂರು, ಕಾಸರಗೋಡು, ಎರ್ನಾಕುಲಂ, ವಯನಾಡು ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿತ್ತು.

ಕಾರವಾರ : ಮುಂದುವರಿದ ಭಾರಿ ಮಳೆ, ಪ್ರವಾಹ ಭೀತಿ

Jul 16 2024, 12:48 AM IST
ಕಾರವಾರದ ಅರಗಾ, ತೋಡೂರು, ಚೆಂಡಿಯಾ, ಐಸ್ ಫ್ಯಾಕ್ಟರಿ ಚೆಂಡಿಯಾ ಮತ್ತಿತರ ಕಡೆಗಳಲ್ಲೂ 50ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ.

ಮಳೆ ಹಾನಿ ಪ್ರದೇಶಗಳಿಗೆ ತಹಸೀಲ್ದಾರ್‌ ಭೇಟಿ

Jul 16 2024, 12:39 AM IST
ಮಳೆ ಹಾನಿ ಪ್ರದೇಶಗಳಿಗೆ ಕುಶಾಲನಗರ ತಾಲೂಕು ತಹಸೀಲ್ದಾರ್‌ ಕಿರಣ್‌ ಗೌರಯ್ಯ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಕುಟುಂಬ ಸದಸ್ಯರೊಂದಿಗೆ ಚರ್ಚೆ ನಡೆಸಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.

ಭಾರಿ ಮಳೆ: ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ

Jul 16 2024, 12:37 AM IST
ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಿಂದ ಕುಮಾರಧಾರ ಉಕ್ಕಿ ಹರಿಯುತ್ತಿದ್ದು, ಸ್ನಾನಘಟ್ಟದ ಭಕ್ತರ ಶೌಚ ಗೃಹ, ಭಕ್ತರ ಲಗೇಜ್ ಕೊಠಡಿಯೂ ಭಾಗಶಃ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ-ಪುತ್ತೂರು-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಹರಿಯುತ್ತಿರುವ ನದಿ ನೀರಿನಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ.

ಬಾಳೆಹೊನ್ನೂರಲ್ಲಿ ಮುಂದುವರೆದ ಪುನರ್ವಸು ಮಳೆ ಅಬ್ಬರ

Jul 16 2024, 12:36 AM IST
ಬಾಳೆಹೊನ್ನೂರಿನಿಂದ ಮೇಲ್ಪಾಲ್ ಮೂಲಕ ಕೊಪ್ಪ ಸಂಪರ್ಕಿಸುವ ಅರಳೀಕೊಪ್ಪದ ಬಳಿ ಬೃಹತ್ ಗಾತ್ರದ ಗರಿಗೆ ಮರ ಬಿದ್ದು ರಸ್ತೆ ಸಂಚಾರ ಬಂದ್ ಆಗಿರುವುದು.

ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ

Jul 16 2024, 12:36 AM IST
ಮಲೆನಾಡು ಪ್ರದೇಶವಾದ ಸಕಲೇಶಪುರ ಹಾಗೂ ಅರೆ ಮಲೆನಾಡು ತಾಲೂಕುಗಳಾದ ಆಲೂರು, ಬೇಲೂರು, ಹಾಸನದಲ್ಲಿಯೂ ವ್ಯಾಪಕ ಮಳೆ ಬೀಳುತ್ತಿರುವುದರಿಂದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಈ ನಾಲ್ಕೂ ತಾಲೂಕುಗಳಲ್ಲಿ ಜು.16ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ಅರಕಲಗೂಡು, ಚನ್ನರಾಯಪಟ್ಟಣ, ಹೊಳೆನರಸೀಪುರ ತಾಲೂಕುಗಳಲ್ಲಿಯೂ ಮಳೆ ಬೀಡುತ್ತಿದ್ದು, ಬರದ ತಾಲೂಕು ಎಂದೇ ಹೆಸರುವಾಸಿಯಾದ ಅರಸೀಕೆರೆ ಭಾಗದಲ್ಲಿ ಕೂಡ ಪೂರ್ಣ ಪ್ರಮಾಣದಲ್ಲಿ ಮೋಡ ಮುಸುಕಿದ ವಾತಾವರಣ ಇದೆ. ಆಗಾಗ ಮಳೆಯೂ ಬರುತ್ತಿದೆ.

ಕೊಡಗು ಜಿಲ್ಲೆಯಾದ್ಯಂತ ಮಳೆ ಅಬ್ಬರ : ಅಪಾರ ಮನೆಗಳಿಗೆ ಹಾನಿ

Jul 16 2024, 12:34 AM IST
ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಅಪಾರ ಪ್ರಮಾಣದಲ್ಲಿ ಮನೆಗಳಿಗೆ ಹಾನಿ ಸಂಭವಿಸಿದೆ.

ನಿರಂತರ ಮಳೆ: ಕುಮಾರಧಾರಾ, ನೇತ್ರಾವತಿ ನದಿಗಳಲ್ಲಿ ಭಾರಿ ಹರಿವು

Jul 16 2024, 12:34 AM IST
ದ.ಕ. ಜಿಲ್ಲೆಯ ಜೀವ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ನದಿಗಳಲ್ಲಿನ ಸೋಮವಾರ ಸಂಜೆ ನೀರಿನ ಹರಿವಿನಲ್ಲಿ ಹೆಚ್ಚಳ ಕಂಡು ಬಂದಿದ್ದು, ನೀರಿನ ಮಟ್ಟವು ೨೭.೫ ಮೀಟರ್ ದಾಖಲಾಗಿದೆ. ಆದಾಗ್ಯೂ ಅಪಾಯದ ಮಟ್ಟಕ್ಕಿಂತ ೪ ಮೀಟರ್ ಕೆಳಗೆ ನೀರಿನ ಹರಿವು ಇದೆ.

ಮಲೆನಾಡಾದ್ಯಂತ ಮಳೆ ಅಬ್ಬರ: ಜನ ಜೀವನ ಅಸ್ತವ್ಯಸ್ತ

Jul 16 2024, 12:33 AM IST
ಬಾಳೆಹೊನ್ನೂರು- ಮೇಲ್ಪಾಲ್ ರಸ್ತೆಯಲ್ಲಿರುವ ಅರಳಿಕೊಪ್ಪ, ಕೊಪ್ಪ ತಾಲೂಕಿನ ಹಗಲಗಂಡಿ, ಜಯಪುರದ ಹೆಗ್ಗೂರು, ಮೂಡಿಗೆರೆ ತಾಲೂಕಿನ ದೇವರಮನೆ- ಕೋಗಿಲೆ ರಸ್ತೆಯಲ್ಲಿ ಮರಗಳು ರಸ್ತೆಗಳಿಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು.

ನರಸಿಂಹರಾಜಪುರ ಭಾರೀ ಮಳೆ: ಮನೆ ಕುಸಿತ

Jul 16 2024, 12:30 AM IST
ನರಸಿಂಹರಾಜಪುರದಿಂದ ರಾವೂರು ಮೀನು ಕ್ಯಾಂಪಿಗೆ ಹೋಗುವ ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಹೊನ್ನೇ ಮರ ಬಿದ್ದು ಕೆಲವು ಸಮಯ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved