2025ನೇ ಸಾಲಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಕ್ವಿಂಟಲ್ಗೆ 420 ರು.ನಷ್ಟು ಹೆಚ್ಚಿಸಲಾಗಿದ್ದು, 12,100 ರು.ಗೆ ಹೆಚ್ಚಿಸಿರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿದೆ. ಇದಕ್ಕಾಗಿ 855 ಕೋಟಿ ರು. ತೆಗೆದಿರಿಸಲಾಗಿದೆ.
ಇತ್ತೀಚಿನ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯೇ ಕಾರಣ. ಅವರ ಜನಪ್ರಿಯತೆಯೊಂದೇ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ನೆಲಸಮಗೊಳಿಸಿತು ಎಂದು ಸಮೀಕ್ಷೆಯೊಂದು ಹೇಳಿದೆ.
ರಾಜ್ಯ ಬಿಜೆಪಿ ಭಿನ್ನಮತ ತಾರಕಕ್ಕೇರಿರುವ ನಡುವೆಯೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ನೆಹರು ಬರೆದಿದ್ದ ಪತ್ರಗಳಲ್ಲಿನ ಅಂಶಗಳನ್ನು ಪ್ರಧಾನಿ ನರೇಂದ್ರ ಮೋದಿ ತಿರುಚಿದ್ದಾರೆ ಎಂದು ಆರೋಪಿಸಿರುವ ರಾಜ್ಯಸಭೆಯ ವಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಈ ವಿಷಯದಲ್ಲಿ ದೇಶವನ್ನು ದಿಕ್ಕು ತಪ್ಪಿಸಿದ್ದಕ್ಕಾಗಿ ಮೋದಿ ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಅತುಲ್ ಪತ್ನಿ ನಿಕಿತಾ ಸಿಂಘಾನಿಯಾ ಕುಟುಂಬದವರು ಬಂಧನವಾದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಟೆಕಿ ತಂದೆ ಪವನ್ ಕುಮಾರ್ ಮೋದಿ, ‘ಅತುಲ್ ಅವರ 4 ವರ್ಷದ ಮಗ ಎಲ್ಲಿದ್ದಾನೆ ಎನ್ನುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಮೊಮ್ಮಗ ಸತ್ತಿದ್ದಾನೋ? ಬದುಕಿದ್ದಾನೋ ಎಂದು ಗೊತ್ತಿಲ್ಲ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
‘ರಕ್ತದ ರುಚಿ ಕಂಡಿದ್ದ ಕಾಂಗ್ರೆಸ್ ಪದೇ ಪದೇ ಸಂವಿಧಾನಕ್ಕೆ ಹಾನಿ ಮಾಡಿತು. ಆದರೆ 2014ರಲ್ಲಿ ನಮ್ಮ ಸರ್ಕಾರ ಬಂದ ನಂತರ, ಭಾರತದ ಶಕ್ತಿ ಮತ್ತು ಏಕತೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಸಂವಿಧಾನದ ದೃಷ್ಟಿಗೆ ಅನುಗುಣವಾಗಿ ನೀತಿ-ನಿರ್ಧಾರ ಕೈಗೊಂಡಿತು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.