ಭಾನುವಾರ ಸಂಜೆ ಭಾರತದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿಯ ಕುರಿತು ಪಾಶ್ಚಾತ್ಯ ಸುದ್ದಿಸಂಸ್ಥೆಗಳು ತರಹೇವಾರಿ ಸುದ್ದಿ ಪ್ರಕಟಿಸಿ ವೆ.
ಭಾರತದ ಪ್ರಧಾನಿಯಾಗಿ ಭಾನುವಾರ ನರೇಂದ್ರ ಮೋದಿಯವರು ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಗಡಿನಾಡು ಕಾಸರಗೋಡಿನ ಸೂಕ್ಷ್ಮ ಕುಸುರಿಯ ಕಲಾವಿದರೊಬ್ಬರು ಅಕ್ಕಿಕಾಳು ಗಾತ್ರದಲ್ಲಿ ಮೋದಿಯ ಕಲಾಕೃತಿ ರಚಿಸಿ ಗಮನ ಸೆಳೆದಿದ್ದಾರೆ.
ಮೋದಿ ಮಂತ್ರಿ ಮಂಡಲದಲ್ಲಿ ಕರ್ನಾಟಕದ ಎಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ನಿರ್ಮಲಾ ಸೀತಾರಾಮನ್ ಹಾಗೂ ಪ್ರಹ್ಲಾದ ಜೋಶಿ ಸ್ಥಾನ ಪಡೆದಿದ್ದಾರೆ. ಇವರ ಕುರಿತ ಮಾಹಿತಿ ಪುಟ 5ರಲ್ಲಿದೆ.
ಹೊಸ ಸಚಿವ ಸಂಪುಟದಲ್ಲಿ ಮೋದಿಯೂ ಸೇರಿದಂತೆ ಒಟ್ಟು 7 ಮಾಜಿ ಮುಖ್ಯಮಂತ್ರಿಗಳಿದ್ದಾರೆ.
ನರೇಂದ್ರ ಮೋದಿಯ ಮೂರನೇ ಸಂಪುಟದಲ್ಲಿ ಉತ್ತರಪ್ರದೇಶ ಮತ್ತು ಬಿಹಾರಕ್ಕೆ ಸಿಂಹಪಾಲು ದೊರೆತಿದೆ. ಉತ್ತರಪ್ರದೇಶಕ್ಕೆ 9 ಮತ್ತು ಬಿಹಾರಕ್ಕೆ 8 ಸಚಿವ ಸ್ಥಾನ ಲಭಿಸಿದೆ. ಅಲ್ಲದೆ ಇನ್ನು ಕೆಲವೇ ದಿನಗಳಲ್ಲಿ ಚುನಾವಣೆ ಎದುರಿಸಲಿರುವ ಮಹಾರಾಷ್ಟ್ರಕ್ಕೂ 6 ಸಚಿವ ಸ್ಥಾನ ನೀಡಲಾಗಿದೆ.