ಪರೀಕ್ಷೆ ಯುದ್ಧ ಅಲ್ಲ ಹಬ್ಬದಂತೆ ಸಂಭ್ರಮಿಸಿ: ಕಲ್ಲಪ್ಪ ಚಿಂಚಲಿ
Jan 16 2024, 01:45 AM ISTಮಹಾಲಿಂಗಪುರ: ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಿದರೆ ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಬಹುದು ಎಂದು ಬಸವಾನಂದ ಶಾಲಾ ಆಡಳಿತ ಮಂಡಳಿಯ ನಿರ್ದೇಶಕ ಕಲ್ಲಪ್ಪ ಚಿಂಚಲಿ ಹೇಳಿದರು.ಶ್ರೀ ಬಸವಾನಂದ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ತಾಯಂದಿರ ಸಭೆಯಲ್ಲಿ ಮಾತನಾಡಿದರು. ಫಲಿತಾಂಶ ಸುಧಾರಣೆಗೆ ಹಾಕಿಕೊಂಡ ಹಲವಾರು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಜೀವನದ ಅತ್ಯುನ್ನತ ಘಟ್ಟವಾದ ಎಸ್ಸಸ್ಸೆಲ್ಸಿ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಪರಿಶ್ರಮದಿಂದ ಓದಿದರೆ ಹಬ್ಬದಂತೆ ಸಂಭ್ರಮ ಪಡಬಹುದು ಎಂದು ಹೇಳಿದರು.