• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಜ್ಜಂಪುರ ರಸ್ತೆ ಪಾದಚಾರಿ ಮಾರ್ಗ ತೆರವಿಗೆ ಆಗ್ರಹ

Nov 20 2024, 12:31 AM IST
ಪಟ್ಟಣದ ಅಜ್ಜಂಪುರ ರಸ್ತೆಯನ್ನು ಕೆಶಿಪ್‌ನವರು ವಿಸ್ತರಿಸುವ ಸಮಯದಲ್ಲಿ ಪರಿಹಾರ ನೀಡಿ ಭೂಸ್ವಾಧೀನ ಪಡೆದುಕೊಂಡ ಭೂಮಿಯಲ್ಲಿ ರಸ್ತೆಯ ಎರಡು ಬದಿ ಪಾದಚಾರಿ ರಸ್ತೆ ನಿರ್ಮಾಣವಾಗುವ ಬದಲು ಪರಿಹಾರ ಪಡೆದವರೇ ಅತಿಕ್ರಮಿಸಿ ಕಟ್ಟಡಗಳನ್ನು ನಿರ್ಮಿಸಿಕೊಂಡಿದ್ದಾರೆ ಎಂದು ದಲಿತ ಸಂಘಟನೆಗಳ ಸದಸ್ಯರು ಆರೋಪಿಸಿ ಪುರಸಭೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಗಬ್ಬು ನಾರುತ್ತಿದೆ ಬಿ. ಕೋಡಿಹಳ್ಳಿ ಅಂಡರ್‌ಬ್ರಿಡ್ಜ್ ರಸ್ತೆ

Nov 19 2024, 12:51 AM IST
ಪಟ್ಟಣ ಸ್ವಚ್ಛವಾಗಿದ್ದರೆ ಮಾತ್ರ ಸಾರ್ವಜನಿಕರು ನೆಮ್ಮದಿಯಿಂದ ಮತ್ತು ಆರೋಗ್ಯದಿಂದ ಬದುಕಲು ಸಾಧ್ಯ, ಆದರೆ ಉಸಿರಾಟ ನಡೆಸಲು ಸಹ ಕಷ್ಟದಿಂದ ಬದುಕುತಿದ್ದಾರೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಬೀರೂರು ಪಟ್ಟಣದ ಪುರಿಭಟ್ಟಿ ನಿವಾಸಿಗಳ ಬದುಕು.

ಹನೂರಿನಲ್ಲಿ ಕೆಶಿಪ್‌ ರಸ್ತೆ ಕಾಮಗಾರಿ ಪೂರ್ಣಗೊ‍‍ಳಿಸಲು ಸಾರ್ವಜನಿಕರ ಆಗ್ರಹ

Nov 18 2024, 12:02 AM IST
ಕೆಶಿಪ್‌ ರಸ್ತೆ ಕಾಮಗಾರಿ ವಿಳಂಬವಾಗಿದ್ದು, ಶೀಘ್ರ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ನಾಗರಿಕರು ಒತ್ತಾಯಿಸಿದ್ದಾರೆ.

ಸುಗಮ ಸಂಚಾರಕ್ಕೆ ರಸ್ತೆ ಅಭಿವೃದ್ಧಿ ಮುಖ್ಯ

Nov 18 2024, 12:00 AM IST
ರಸ್ತೆ ಅಭಿವೃದ್ಧಿ ಹೆಚ್ಚಾದಷ್ಟು ಸಂಚಾರ ಸುಗಮವಾಗಿ ಸಾಗಲು ಸಾಧ್ಯವಾಗುತ್ತದೆ. ಹಾಳಾದ ಹಾಗೂ ಗುಂಡಿ ಬಿದ್ದ ರಸ್ತೆಗಳಿಂದ ಅಪಘಾತಗಳು ಹೆಚ್ಚಾಗಲಿದ್ದು, ರಸ್ತೆ ಅಭಿವೃದ್ದಿಯಿಂದ ಅಪಘಾತಗಳನ್ನು ತಡೆಗಟ್ಟಬಹುದಾಗಿದೆ ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಕೆ.ಸುರೇಶ್ (ಹುಲ್ಲಳ್ಳಿ) ತಿಳಿಸಿದರು. ಶಾಸಕನಾಗಿರುವ ನನಗೆ ಅವರ ಸೇವೆಯನ್ನು ಮಾಡುವುದೇ ಮುಖ್ಯ ಗುರಿಯಾಗಿದ್ದು, ಜನರ ಸೇವೆಗಾಗಿ ದಿನದ 24 ಗಂಟೆಯೂ ಕೆಲಸ ಮಾಡಲು ಸದಾ ಸಿದ್ಧನಿದ್ದೇನೆ ಎಂದು ತಿಳಿಸಿದರು.

ರೈಲ್ವೆ ಮೇಲ್ಸೇತುವೆ ರಸ್ತೆ ಧೂಳುಮಯ...!

Nov 17 2024, 01:19 AM IST
ರಸ್ತೆ ಕಾಮಗಾರಿ ವಹಿಸಿಕೊಂಡಿರುವ ಗುತ್ತಿಗೆದಾರ ರಸ್ತೆಯನ್ನು ಅಗೆದು ಜಲ್ಲಿ ಬಿಚಾವಣೆ ಮಾಡಿ ಅದರ ಮೇಲೆ ಡಸ್ಟ್ ಹಾಕಿ ಹೋದವನು ಈವರೆಗೆ ಆ ರಸ್ತೆ ಕಡೆ ತಿರುಗಿಯೂ ನೋಡಿಲ್ಲ. ಇದರಿಂದ ವಾಹನಗಳು ಓಡಾಡುವ ಸಮಯದಲ್ಲಿ ಮೇಲೇಳುವ ಧೂಳು ಈ ರಸ್ತೆಯಲ್ಲಿ ಓಡಾಡುವವರಿಗೆ ತೀವ್ರ ಕಿರಿಕಿರಿ ಉಂಟುಮಾಡುತ್ತಿರುವುದಲ್ಲದೇ, ಲಾರಿ, ಬಸ್‌ಗಳು, ಟ್ರ್ಯಾಕ್ಟರ್‌ಗಳು ಸಾಗುವ ವೇಳೆ ಹಿಂಬದಿಯಿಂದ ದ್ವಿಚಕ್ರ ವಾಹನ ಸವಾರರು ಹೋಗಲಾರದಷ್ಟು ಧೂಳು ಆವರಿಸಿಕೊಳ್ಳುತ್ತಿದೆ.

ರಸ್ತೆ ಬಿಡಿಸಿಕೊಡದ ಪಿಡಿಒ ಮೇಲೆ ಕ್ರಮಕ್ಕೆ ಆಗ್ರಹ

Nov 16 2024, 12:33 AM IST
ಗ್ರಾಮಠಾಣಾ ಜಾಗಕ್ಕೆ ಸೇರಿದ ಸುಮಾರು ೧೨ ಅಡಿ ಜಾಗದಲ್ಲಿ ಕೂಡಲೇ ರಸ್ತೆ ಬಿಡಿಸಿಕೊಡುವಂತೆ ಬೇಲೂರು ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಮೌಖಿಕವಾಗಿ ಸ್ಥಳದಲ್ಲಿ ಪಿಡಿಒಗೆ ಆದೇಶ ಮಾಡಿದ್ದರೂ ಸಹ ರಸ್ತೆ ಬಿಡಿಸಿಕೊಡುವಲ್ಲಿ ವಿಫಲರಾಗಿರುವ ಪಿಡಿಒ ರಘುನಾಥರವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಶುಕ್ರವಾರ ಕುಟುಂಬವೊಂದು ಡಿಸಿ ಕಚೇರಿ ಮುಂದೆ ಧರಣಿ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.

ಹಳ್ಳಿಗಾಡಿನ ಜನರಿಗೂ ಗುಣಮಟ್ಟದ ರಸ್ತೆ ಸಿಗಬೇಕು

Nov 15 2024, 12:36 AM IST
ಎತ್ತಿನಹೊಳೆ ಯೋಜನೆಯಡಿ ೫೦ ಲಕ್ಷ ರು.ವೆಚ್ಚದಲ್ಲಿ ತಾಲೂಕಿನ ಬಾಗಿಲ ಘಟ್ಟದಿಂದ ಜೋಯಿಸರ ಕೊಪ್ಪಲಿನವರಗೆ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಸ್ಥಳೀಯ ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಗುರುವಾರ ಚಾಲನೆ ನೀಡಿದರು. ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸಿ ಸಂಚಾರ ಸುಗಮವಾಗಿಸಲು ಈ ರಸ್ತೆ ನಿರ್ಮಿಸಲಾಗುತ್ತಿದೆ ಎಂದರು.

ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಸೂಚನೆ: ಟಿ.ಡಿ.ರಾಜೇಗೌಡ ಮಾಹಿತಿ

Nov 15 2024, 12:35 AM IST
ನರಸಿಂಹರಾಜಪುರ, ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಖಾಂಡ್ಯ, ಬಾಳೆಹೊನ್ನೂರು ಭಾಗದಲ್ಲಿನ ಲೋಕೋಪಯೋಗಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಗುಣಮಟ್ಟದ ಕಾಮಗಾರಿ ಕೈಗೊಂಡು ಮುಚ್ಚಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ರಸ್ತೆ ಗುಂಡಿಗಳಿಗೆ ಬಂತು ನಾವೀನ್ಯತೆಯ ಕಾಯಕಲ್ಪ

Nov 15 2024, 12:34 AM IST
ರಸ್ತೆಯಲ್ಲಿ ಹೋಗುವಾಗ ಎದುರಾಗುವ ಗುಂಡಿಗಳು ಅದೆಷ್ಟೋ ಸಂದರ್ಭದಲ್ಲಿ ವಾಹನ ಸವಾರರಿಗೆ ಅಪಘಾತ ಉಂಟು ಮಾಡುತ್ತದೆ. ಅದರಲ್ಲೂ ಮಳೆಗಾಲದಲ್ಲಿ ಗುಂಡಿಗಳದ್ದೆ ಕಾರುಬಾರು. ಇಂತಹ ಸವಾಲುಗಳನ್ನು ಅರಿತ ಜೆ.ಎನ್.ಎನ್‌ ಎಂಜಿನಿಯರಿಂಗ್‌ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ತಂಡ ''''ಜೆ.ಎನ್.ಎನ್.ಸಿ.ಇ ಕೋಲ್ಡ್ ಪಾಟ್ ಹೋಲ್ ಮಿಕ್ಸ್'''' ಎಂಬ ಉತ್ಪನ್ನ ಆವಿಷ್ಕರಿಸಿದೆ.

ರಸ್ತೆ, ಡಿವೈಡರ್‌, ವಿದ್ಯುತ್ ದೀಪ ಕಾಮಗಾರಿಗಳ ಪರಿಶೀಲನೆ

Nov 15 2024, 12:33 AM IST
ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ವ್ಯಾಪ್ತಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದಿರುವ ರಸ್ತೆ ಕಾಮಗಾರಿ, ರಸ್ತೆ ಡಿವೈಡರ್, ರೋಡ್ ಲೈಟ್ ಕಾಮಗಾರಿಗಳು ಕಳಪೆಯಾಗಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೋರಿ ತಾಲೂಕಿನ ಭ್ರಷ್ಟಾಚಾರ ವಿರೋಧಿ ವೇದಿಕೆ ಕಾರ್ಯದರ್ಶಿ ಸೊರಟೂರು ಹನುಮಂತಪ್ಪ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ಮಂಗಳವಾರ ಲೋಕಾಯುಕ್ತ ಸಂಸ್ಥೆ ಮುಖ್ಯ ಅಭಿಯಂತರರಾದ ಶುಭ ಟಿ. ಅವಳಿ ತಾಲೂಕುಗಳಿಗೆ ಭೇಟಿ ನೀಡಿ, ಕಾಮಗಾರಿಗಳ ಸ್ಥಳ ಪರೀಶೀಲನೆ ನಡೆಸಿದ್ದಾರೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 107
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved