ವಿದ್ಯುತ್ ತಂತಿ ತುಂಡಾಗಿ ರೈತ ಸಾವು

Nov 25 2023, 01:15 AM IST
ಅಧಿಕಾರಿಗಳ ನಿರ್ಲಕ್ಷ್ಯದಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಟ್ಟೆಕ್ಯಾತನಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ರಾಜೇನಹಳ್ಳಿ ರೈತ ರವಿಕುಮಾರ್(43) ಮೃತ ರೈತ.ರವಿಕುಮಾರ್ ರಾಜೇನಹಳ್ಳಿಯಲ್ಲಿ ವಾಸವಿದ್ದು, ಗುರುವಾರ ಮಧಾಹ್ನ ಎರಡು ಗಂಟೆ ಸಮಯದಲ್ಲಿ ಕಟ್ಟೆಕ್ಯಾತನಹಳ್ಳಿ ಬಳಿ ಇರುವ ತಮ್ಮ ಜೀಮೀನಿನಲ್ಲಿ ಹುಲ್ಲು ಕುಯ್ಯಲು ತೆರಳಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಟಿಸಿಯಿಂದ ವಿದ್ಯುತ್ ತಂತಿ ತುಂಡಾಗಿರುವುದನ್ನು ಗಮನಿಸದೇ ಭತ್ತದ ಗದ್ದೆಯ ಬದುವಿನ ಮೇಲೆ ತೆರಳಿದಾಗ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸಂಜೆಯಾದರೂ ಮನೆಗೆ ಬಾರದ ರವಿಕುಮಾರ್ ಅವರನ್ನು ಹುಡುಕಿಕೊಂಡು ಅವರ ಭಾವಮೈದುನ ಜಮೀನಿನ ಬಳಿ ಬಂದಿದ್ದಾರೆ. ಅಲ್ಲಿ ರವಿಕುಮಾರ್ ಶವ ಪತ್ತೆಯಾಗಿದೆ.