ನಿರ್ಬಂಧವಿದ್ದರೂ ಭಾರಿ ವಾಹನ ಓಡಾಟ: ಬೆಳೆಗಾರರ ಆಕ್ಷೇಪ
Jul 10 2024, 12:33 AM ISTಭಾರೀ ವಾಹನಗಳ ಸಂಚಾರಕ್ಕೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದರೂ ಇಂದಿಗೂ ಗ್ರಾಮೀಣ ರಸ್ತೆಗಳಲ್ಲಿ ಭಾರೀ ವಾಹನಗಳಲ್ಲಿ ಮರಗಳ ಸಾಗಾಟ ನಿರಾತಂಕವಾಗಿ ನಡೆಯುತ್ತಿದೆ. ಇದರಿಂದಾಗಿ ರಸ್ತೆಗಳು ಸಂಪೂರ್ಣ ಹದಗೆಟ್ಟು ಗ್ರಾಮೀಣರು ಸಂಕಷ್ಟಕ್ಕೆ ಸಿಲುಕಿರುವುದಾಗಿ ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದ ಬೆಳೆಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.