ರಸ್ತೆ ನಿರ್ಮಿಸದಿದ್ದರೆ ವಿಮಾನ ನಿಲ್ದಾಣದ ಕಾಂಪೌಂಡ್ ನೆಲಸಮ
Oct 29 2025, 01:15 AM ISTಉದ್ದೇಶಿತ ವಿಮಾನ ನಿಲ್ದಾಣದ ಸುತ್ತ ನಿರ್ಮಿಸಲಾಗಿರುವ ಕಾಂಪೌಂಡ್ ಹೊರಗೆ ಕನಿಷ್ಠ ೩೦ ಅಡಿ ರಸ್ತೆ ನಿರ್ಮಿಸಿಕೊಡಲು ಕ್ರಮಕೈಗೊಳ್ಳಬೇಕು. ೧೫ ದಿನಗಳ ಒಳಗೆ ರಸ್ತೆ ನಿರ್ಮಿಸದಿದ್ದರೇ ಹಳ್ಳಿ ಜನರು ಎಲ್ಲಾ ಸೇರಿ ಕಾಂಪೌಂಡ್ ಬೀಳಿಸುವುದು ಅನಿವಾರ್ಯವಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಆರ್.ಪಿ. ವೆಂಕಟೇಶ್ ಮೂರ್ತಿ ಎಚ್ಚರಿಸಿದರು. ಸರ್ಕಾರ ನೀಡಿದ ಜಾಗದ ಸುತ್ತ ಎತ್ತರದ ಗೋಡೆ ಮತ್ತು ಮುಳ್ಳಿನ ತಂತಿಯ ಸರಪಳಿಯು ನಿರ್ಮಿಸಲಾಯಿತು. ಆದರೆ ಕೆಲಸ ಮುಗಿದು ವರ್ಷಗಳು ಕಳೆದರೂ ವಿಮಾನಗಳ ಹಾರಾಟ ಕಾಣಿಸಲಿಲ್ಲ. ದ್ಯಾವಲಾಪುರ, ಮೈಲನಹಳ್ಳಿ, ತೆಂಡೆಹಳ್ಳಿ, ಲಕ್ಷ್ಮೀಸಾಗರ, ಬೂವನಹಳ್ಳಿ ಈ ಹಳ್ಳಿಗಳ ರೈತರು ಪ್ರತಿದಿನ ಕಷ್ಟ ಅನುಭವಿಸುತ್ತಿದ್ದಾರೆ ಎಂದರು.