ಶಾಸಕ ಶಿವಲಿಂಗೇಗೌಡರ ವಿರುದ್ಧ ಸಂತೋಷ್ ನೇತೃತ್ವದಲ್ಲಿ ಪ್ರತಿಭಟನೆ
Oct 22 2024, 12:03 AM ISTಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಹಣದ ಹೊಳೆ ಹರಿಸಲಾಗಿದೆ. ಅಷ್ಟೊಂದು ದುಡ್ಡು ಎಲ್ಲಿಂದ ಬಂತು ಎನ್ನುವ ಕುರಿತು ತನಿಖೆ ಮಾಡಬೇಕು. ರೈತರ ಜಮೀನು ಕಬಳಿಸಲು ಹೊರಟಿರುವ ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರನ್ನು ವಜಾಗೊಳಿಸಿ, ತನಿಖೆ ನಡೆಸಿದರೆ ಸತ್ಯಾಂಶ ಹೊರಬರಲಿದೆ. ಮೂರು ಗ್ರಾಮಗಳ ರೈತರ ಭೂಮಿ ವಶಕ್ಕೆ ಪಡೆಯುವುದಿಲ್ಲ ಎಂದು ಡಿಸಿ ಘೋಷಣೆ ಮಾಡಬೇಕು. ಅಲ್ಲಿಯವರೆಗೆ ಹೋರಾಟದಿಂದ ಹಿಂದೆ ಸರಿಯುವ ಮಾತಿಲ್ಲ ಎಂದು ಜೆಡಿಎಸ್ ಮುಖಂಡ ಎನ್.ಆರ್.ಸಂತೋಷ್ ಆಕ್ರೋಶ ಹೊರಹಾಕಿದರು.