65 ಸಾವಿರ ನಿವಾಸಗಳಿಗೆ ಲಾಡು ವಿತರಿಸಿದ ಶಾಸಕ ಗುಡಗುಂಟಿ

Jan 23 2024, 01:47 AM IST
ಜಮಖಂಡಿ: ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾನ ರಾಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಜಮಖಂಡಿ ಕ್ಷೇತ್ರಾದ್ಯಂತ 65 ಸಾವಿರ ನಿವಾಸಗಳೀಗೆ 1.30 ಲಕ್ಷಕ್ಕೂ ಅಧಿಕ ಲಾಡುಗಳನ್ನು ಶಾಸಕ ನಾಡೋಜ ಜಗದೀಶ ಗುಡಗುಂಟಿ ವಿತರಿಸಿದರು. ನಗರದ ಹನುಮಾನ ಮಂದಿರದ ಮುಂಬಾಗದಲ್ಲಿ ಭವ್ಯ ಶ್ರೀರಾಮನ ಮೂರ್ತಿಗೆ ಪೂಜೆ ಸಲ್ಲಿಸುವುದರೊಂದಿಗೆ ಲಾಡು ವಿತರಣೆಗೆ ಚಾಲನೆ ನೀಡಿದರು. ನಂತರ ಹನುಮಾನ ದೇವಸ್ಥಾನ, ರಾಮೇಶ್ವರ ದೇವಸ್ಥಾನ, ರಾಘವೇಂದ್ರ ಮಠ, ರಾಮದಾಸ, ಬಾಲಾಜಿ ಮಂದಿರ, ಅಪ್ಪಾಸಾಬ ವಿಠ್ಠಲ ಮಂದಿರದಲ್ಲಿ ಪೂಜೆ ಸಲ್ಲಿಸಿದರು. ವೃದ್ದಾಶ್ರಮಕ್ಕೆ ಭೆಟ್ಟಿ ನೀಡಿ ಸಿಹಿ ಹಂಚಿದರು. ಹಾಗೂ ಕ್ಷೇತ್ರಾದ್ಯಂತ 1.30ಲಕ್ಷಕೂ ಅಧಿಕ ಲಾಡುಗಳನ್ನು ವಿತರಿಸಿದರು.

ರಾಜ್ಯ ಸರ್ಕಾರ ಮಹಿಳೆಯರ ಸ್ವಾವಲಂಬನೆಗೆ ಹೆಚ್ಚು ಒತ್ತು ನೀಡಿದೆ: ಶಾಸಕ ಜಿ.ಎಚ್.ಶ್ರೀನಿವಾಸ್

Jan 23 2024, 01:46 AM IST
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ಜಿ.ಎಚ್.ಶ್ರೀನಿವಾಸ್ ಜನಹಿತ ಟ್ರಸ್ಟ್ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಸಾಮೂಹಿಕ ಸೀಮಂತ ಕಾರ್ಯಕ್ರಮ, ಪೌಷ್ಠಿಕ ಆಹಾರ ಪ್ರಾತ್ಯಕ್ಷತೆಯಲ್ಲಿ ಶಾಸಕ ಜಿಎಚ್‌ ಶ್ರೀನಿವಾಸ್ ಮಾತನಾಡಿ ನಮ್ಮ ಹಿಂದಿನ ಶಾಸಕ ಅವಧಿಯಲ್ಲಿಯೂ ಸಾಕಷ್ಟು ಬಾರಿ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿದೆ. ಗರ್ಭಿಣಿ ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಆರೋಗ್ಯವಂತ ಮಗುವಿಗೆ ಜನ್ಮ ನೀಡಬಹುದು. ಮಹಿಳೆಯರ ಸ್ವಾವಲಂಬನೆಗೆ ಹೆಚ್ಚು ಒತ್ತು ನೀಡಿರುವ ರಾಜ್ಯ ಸರ್ಕಾರ ಗೃಹಲಕ್ಷ್ಮೀ, ಶಕ್ತಿ ಯೋಜನೆಯಂತಹ ಮಹಿಳೆಯರ ಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ನುಡಿದಂತೆ ನಡೆದ ನೇರ ನಿಷ್ಠುರ ನಿಜಶರಣ: ಶಾಸಕ ಬಿ.ಬಿ. ಚಿಮ್ಮನಕಟ್ಟಿ

Jan 22 2024, 02:20 AM IST
ಬಾದಾಮಿ: ೧೨ನೇ ಶತಮಾನದಲ್ಲಿ ಬಸವಣ್ಣನವರು ಕಾಯಕ ಯೋಗಿಗಳನ್ನು ಗುರುತಿಸಿ ಲಿಂಗಧಾರಣೆ ಮಾಡಿ ಶರಣ ಸಂಸ್ಕೃತಿಯಿಂದ ಅನುಭವ ಮಂಟಪದ ಮೂಲಕ ಲೋಕ ಕಲ್ಯಾಣಾರ್ಥ ಕಾಲಜ್ಞಾನ ಚಿಂತನೆ ನಡೆಸಿದ್ದರು. ಎಲ್ಲ ಶರಣರಗಿಂತ ಅಂಬಿಗರ ಚೌಡಯ್ಯನವರು ದಿಟ್ಟ ಮತ್ತು ಕ್ರಾಂತಿಕಾರಕ ನುಡಿದಂತೆ ನಡೆದು ನೇರ, ನಿಷ್ಠುರ ವ್ಯಕ್ತಿ ಎಂದು ಹೆಸರುವಾಸಿಯಾದವರು ಅಂಬಿಗರ ಚೌಡಯ್ಯ ಎಂದು ಶಾಸಕ ಬಿ.ಬಿ. ಚಿಮ್ಮನಕಟ್ಟಿ ಹೇಳಿದರು. ಭಾನುವಾರ ಕುಮಾರೇಶ್ವರ ಸಭಾಭವನ ಮಂಟಪದಲ್ಲಿ ತಾಲೂಕು ಆಡಳಿತ ಮತ್ತು ಅಂಬಿಗರ ಸಮಾಜದ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯನವರ ೯೦೪ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಲ್ಲರಿಗೂ ಶರಣರು ಎಂದಿದ್ದರೆ. ಅಂಬಿಗರ ಚೌಡಯ್ಯನವರಿಗೆ ನಿಜಶರಣ ಎಂದು ಕರೆದರು.