ಮಕ್ಕಳಿಗೆ ಒಳ್ಳೆಯ ಬೋಧನೆ, ಸಂಸ್ಕಾರ ನೀಡಿ: ಶಾಸಕ ಧುರ್ಯೋದನ
Feb 14 2025, 12:46 AM ISTಗುಣಮಟ್ಟದ ಕಟ್ಟಡ ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಹೇಳಿದರು.ಪಟ್ಟಣದ ಮೀರಾಪುರಹಟ್ಟಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ (ಆರ್ಎಂಎಸ್ಎ) ಸುಮಾರು ₹1.60 ಕೋಟಿಗಳಲ್ಲಿ ನಿರ್ಮಿಸಿದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಟ್ಟಡ ಕಾಮಗಾರಿ ಗುಣಮಟ್ಟದ್ದಾಗಿದೆ. ಅದೇ ರೀತಿ ಮಕ್ಕಳಿಗೆ ಗುಣಮಟ್ಟದ ಬೋಧನೆ, ಸಂಸ್ಕಾರ ಸಿಗಲಿ. ನನ್ನ ಅನುದಾನದಲ್ಲಿ ಶಾಲೆಗೆ ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಕಾಂಪೌಂಡ್ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದರು.