ವೈಯಕ್ತಿಕವಾಗಿ 42 ಕೆರೆ ತುಂಬಿಸಲಾಗಿದೆ ಎಂದ ಶಾಸಕ ಬಾಲಕೃಷ್ಣ

Oct 26 2025, 02:00 AM IST
ಹುಲ್ಲೇನಹಳ್ಳಿ ಗ್ರಾಮದ ಕೆರೆಗೆ ಪೈಪ್‌ಲೈನ್ ಮೂಲಕ ನಿರೋದಗಿಸುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ತಾವು ಕಳೆದ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ಸುಮಾರು 13 ಲಕ್ಷ ರು. ವೈಯಕ್ತಿಕವಾಗಿ ಹಣ ನೀಡಿ ರಾಯಸಮುದ್ರ ಕಾವಲು ಕೆರೆಯಿಂದ ಸುಮಾರು 3 ಕಿ.ಮೀ ಪೈಪ್‌ಲೈನ್ ಮೂಲಕ ಮೋಟಾರ್‌ ಅಳವಡಿಸಿ ಕೆರೆಗೆ ನೀರು ಹರಿಸುವ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ ಎಂದರು. ಗ್ರಾಮದಲ್ಲಿ ಈಗಾಗಲೇ ಅಂಬೇಡ್ಕರ್‌ ಭವನ ನಿರ್ಮಾಣ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಕಟ್ಟಡವನ್ನು 60 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಜೊತೆಗೆ ಗ್ರಾಮದ ಪರಿಮಿತಿಯಲ್ಲಿ ಕಾಂಕ್ರೀಟ್ ರಸ್ತೆ ಒಳ ಚರಂಡಿ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದರು.