ಶಿಗ್ಗಾಂವಿ ಕ್ಷೇತ್ರದ ಸಾಮರಸ್ಯ ಕಾಪಾಡಲು ಈ ಚುನಾವಣೆ ಗೆಲುವು ಮುಖ್ಯ-ಸಂಸದ ಬೊಮ್ಮಾಯಿ
Oct 22 2024, 12:10 AM ISTಶಿಗ್ಗಾಂವಿ ಕ್ಷೇತ್ರದ ಚುನಾವಣೆಯ ಗೆಲುವು, ಈ ಕ್ಷೇತದ ಭವಿಷ್ಯ, ಅಭಿವೃದ್ಧಿ ಮತ್ತು ಕ್ಷೇತ್ರದ ಸಾಮರಸ್ಯದ ಬದುಕು ಕಾಪಾಡಲಿದೆ. ಈ ಕ್ಷೇತ್ರದಲ್ಲಿ ಸಾಮರಸ್ಯ ಕದಲುತ್ತಿದೆ. ದ್ವೇಷದ ರಾಜಕಾರಣ ಬರುತ್ತಿದೆ. ಪೊಲೀಸ್ ಸ್ಟೇಷನ್ ರಾಜಕಾರಣ ಮಾಡುತ್ತಿದೆ. ಇದು ಮುಂದುವರೆಯಬಾರದು. ನಮಗೆ ಜಾತಿ, ಮತ ಧರ್ಮ ಇಲ್ಲ. ನಮ್ಮಲ್ಲಿ ನ್ಯಾಯ, ನೀತಿ ಇದೆ. ಈ ಚುನಾವಣೆ ನಮ್ಮ ನಿಮ್ಮೆಲ್ಲರ ಭವಿಷ್ಯದ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಹೇಳಿದರು.