ಖಾಸಗಿ ಕಾಲೇಜುಗಳ ಮಾಲೀಕರೊಂದಿಗೆ ಸರ್ಕಾರ ಶಾಮೀಲು

Sep 12 2024, 01:50 AM IST
ಕಾಲೇಜುಗಳು ಆರಂಭವಾಗಿ ಈಗಾಗಲೇ ಒಂದೂವರೆ ತಿಂಗಳು ಕಳೆಯುತ್ತಿದ್ದರೂ ಈವರೆಗೆ ಸಮರ್ಪಕ ಬೋಧಕ ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡಲು ಆಗಿಲ್ಲ. ಪ್ರಾಂಶುಪಾಲರೇ ಕಸ ಗುಡಿಸುವಂತಾಗಿದೆ. ಸರ್ಕಾರಕ್ಕೆ ಏನು ಕಾಯಿಲೆ ಹಿಡಿದಿದೆ. ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕರು ಇಲ್ಲ ಎಂದು ವಿದ್ಯಾರ್ಥಿಗಳು ಖಾಸಗಿ ಕಾಲೇಜಿಗೆ ಹೋಗುತ್ತಾರೆ. ಅರೆಕಾಲಿಕ ಉಪನ್ಯಾಸಕರನ್ನೋ ಇಲ್ಲವೇ ಕಾಯಂ ಉಪನ್ಯಾಸಕರನ್ನಾದರೂ ಹಾಕಿ. ಬಡವರ ಬಗ್ಗೆ ಮೊದಲು ಚಿಂತನೆ ಮಾಡಿ. ಬಡವರ ಮಕ್ಕಳು ಕಲಿಯುವ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಬದಲಾಗಿ ಖಾಸಗಿ ಶಾಲೆಗಳ ಜೊತೆ ಶಾಮೀಲಾಗಿರುವ ಸರ್ಕಾರ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಮುಗಿಯುವುದನ್ನು ಕಾಯುತ್ತಿದೆ ಎಂದು ಶಾಸಕ ರೇವಣ್ಣ ಆರೋಪಿಸಿದರು.