ಸರ್ಕಾರಿ ಆಸ್ಪತ್ರೆಗಳಿಗೆ ಕಂಪನಿಗಳು ಪೂರೈಸುವ ಔಷಧಗಳ ಗುಣಮಟ್ಟವನ್ನು ಎರಡನೇ ಬಾರಿ ಪ್ರಯೋಗಾಲಯದಿಂದ ಪರೀಕ್ಷಿಸಿದ ನಂತರವೇ ಜಿಲ್ಲೆ, ತಾಲ್ಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪೂರೈಸಲು ತೀರ್ಮಾನಿಸಲಾಗಿದೆ.
ಸರ್ಕಾರಿ ಆಸ್ಪತ್ರೆ ವೈದ್ಯ ರು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಹೊರಗೆ ಪ್ರ್ಯಾಕ್ಟೀಸ್ ಮಾಡುವಂತಿಲ್ಲ. ಇದರ ಮೇಲ್ವಿಚಾರಣೆಗಾಗಿ 4 ಬಾರಿ ಬಯೋಮೆಟ್ರಿಕ್ ಹಾಜರಾತಿ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ನಿರ್ದೇಶಕಿಯಾಗಿರುವ ಕಂಪನಿಗೆ 2023ನೇ ಸಾಲಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಯಿಂದ ಶಿರಾ ಕೈಗಾರಿಕಾ ಪ್ರದೇಶದಲ್ಲಿ 12 ಎಕರೆ ಸರ್ಕಾರ ಜಮೀನು ಮಂಜೂರು ಮಾಡಿದ್ದ ವಿಚಾರ ಚರ್ಚೆಗೆ ಗ್ರಾಸವಾಗಿದೆ.