ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹಬ್ಬಿಸಿದರೆ ಶಿಸ್ತುಕ್ರಮ

Aug 11 2025, 12:30 AM IST
ಸಾಮಾಜಿಕ ಜಾಲತಾಣಗಳಲ್ಲಿ ಕೋಮುಗಲಭೆಗೆ ಸಂಬಂಧಪಟ್ಟ ಸುಳ್ಳುಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಪಿಐ ರೇವಣ್ಣ ಎಚ್ಚರಿಕೆ ನೀಡಿದರು. ಮೆರವಣಿಗೆ ಸಂದರ್ಭದಲ್ಲಿ ಸಾರ್ವಜನಿಕರರಿಗೆ ತೊಂದರೆಯಾಗದಂತೆ ಸ್ವಯಂ ಸೇವಕರನ್ನು ನೇಮಿಸವೇಕು. ಗಣೇಶ ಪ್ರತಿಷ್ಠಾಪನೆ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಕಡ್ಡಾಯ ಅನುಮತಿ ಬೇಕು. ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕತ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಇದಕ್ಕೆ ನೇರವಾಗಿ ಆಯೋಜಕರನ್ನೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಮಸೀದಿಗಳಲ್ಲಿ ಎಲ್ಲಾ ಯುವಕರಿಗೂ ಸೂಕ್ತ ಮಾಹಿತಿ ನೀಡುವ ಮೂಲಕ ಅತಿರೇಕದ ವರ್ತನೆಗೆ ಅವಕಾಶ ನೀಡುವುದಿಲ್ಲ ಅಂತಹ ವರ್ತನೆ ಕಂಡುಬಂದರೆ ಅವರ ವಿರುದ್ಧ ಪ್ರಕರಣ ದಾಖಲಿಸಿ ವಾಹನ ವಶಪಡಿಸಿಕೊಳ್ಳಲಾಗುವುದು ಎಂದರು.