• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜ ಸುಧಾರಣೆಯಲ್ಲಿ ವಚನ ಸಾಹಿತ್ಯ ಕೊಡುಗೆ ಅಮೂಲ್ಯ

Jan 17 2024, 01:47 AM IST
ಸಮಾಜ ಸುಧಾರಣೆಯಲ್ಲಿ ವಚನ ಸಾಹಿತ್ಯದ ಕೊಡುಗೆ ಅಮೂಲ್ಯವಾಗಿದೆ. ಸಾಹಿತ್ಯ, ವಚನ ರಚನೆ ಕೇವಲ ಮೇಲ್ವರ್ಗ, ರಾಜಾಶ್ರಯದ ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೀಮಿತವಾಗಿಲ್ಲ. ಜನಸಾಮಾನ್ಯರು ವಚನ ಸಾಹಿತ್ಯ ರಚನೆ ಮೂಲಕ ಸಮಾಜ ಸುಧಾರಣೆಯಲ್ಲಿ ತೊಡಗಿಸಿಕೊಳ್ಳಬಹುದು ಎಂಬುದನ್ನು 12ನೇ ಶತಮಾನದಲ್ಲಿ ಸಿದ್ದರಾಮೇಶ್ವರ ಅವರು ಕಾಯಕ ವೃತ್ತಿ ಜತೆಗೆ ತೋರಿಸಿಕೊಟ್ಟಿದ್ದಾರೆ ಎಂದು ಶಿಕಾರಿಪುರ ತಹಸೀಲ್ದಾರ್ ಮಲ್ಲೇಶ್ ಬೀರಪ್ಪ ಪೂಜಾರ್ ಹೇಳಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ

Jan 17 2024, 01:47 AM IST
ಹೆಬ್ರಿ ತಾಲೂಕು ಮುದ್ರಾಡಿ ಸ. ಹಿ. ಪ್ರಾ. ಶಾಲೆಯ ಅಂಬಾತನಯ ಮುದ್ರಾಡಿ ವೇದಿಕೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಅಷ್ಟವಧಾನಿ ಕಬ್ಬಿನಾಲೆ ಡಾ. ಬಾಲಕೃಷ್ಣ ಭಾರದ್ವಾಜ್ ಅವರ ಅಧ್ಯಕ್ಷತೆಯಲ್ಲಿ ಫೆ.2 ರಂದು ಸಮ್ಮೇಳನ ನಡೆಯಲಿದೆ.ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಭಾಸ್ಕರ್ ಜೋಯಿಸ್ ಬಿಡುಗಡೆಗೊಳಿಸಿದರು.

ಜ.19ರಂದು ವಚನ ಸಾಹಿತ್ಯ ಸಮ್ಮೇಳನ: ಭರದ ಸಿದ್ಧತೆ

Jan 17 2024, 01:47 AM IST
ಜ.19ರಂದು ಹಮ್ಮಿಕೊಂಡಿರುವ ಒಂದು ದಿನದ ಕಲಬುರಗಿ ಜಿಲ್ಲಾ ಪ್ರಥಮ ವಚನ ಸಾಹಿತ್ಯ ಸಮ್ಮೇಳನವನ್ನು ಅನುಭವ ಮಂಟಪದ ರೀತಿಯಲ್ಲಿ ಅರ್ಥಪೂರ್ಣವಾಗಿ ನಡೆಸಲು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಮ್ಮೇಳನಾಧ್ಯಕ್ಷರಾಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ನಿರ್ದೇಶಕಿ, ಹಿರಿಯ ಸಾಹಿತಿ ಡಾ. ನೀಲಾಂಬಿಕಾ ಪೊಲೀಸ್ ಪಾಟೀಲರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಸುರೇಶ ಆರ್. ಸಜ್ಜನ್ ತಿಳಿಸಿದರು.

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ. ಬೆಳವಾಡಿ ಮಂಜುನಾಥ

Jan 16 2024, 01:46 AM IST
ಚಿಕ್ಕಮಗಳೂರು ತಾಲೂಕಿನ ಶಿರವಾಸೆ ಗ್ರಾಮದಲ್ಲಿ ಫೆ. 19 ರಂದು ಆಯೋಜಿಸಿರುವ 4ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಉಪನ್ಯಾಸಕ ಡಾ. ಬೆಳವಾಡಿ ಮಂಜುನಾಥ ಆಯ್ಕೆಯಾಗಿದ್ದಾರೆ.

ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಮಹಾ ಸರ್ಕಾರದಿಂದ ನೆರವು

Jan 15 2024, 01:46 AM IST
ಬೆಳಗಾವಿಯಲ್ಲಿ ಆಯೋಜಿಸುವ ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ನೆರವು ನೀಡಲಾಗವುದು ಎಂದು ಹೇಳುವ ಮೂಲಕ ಚಂದಗಡ ಶಾಸಕ ರಾಜೇಶ್ ಪಾಟೀಲ ಉದ್ದಟತನ ಪ್ರದರ್ಶಿಸಿದ್ದಾರೆ.

ಸಾಹಿತ್ಯ ಪರಿಷತ್ ಆಶಯಕ್ಕೆ ಸಹಕಾರ ದೊರೆಯಲಿ: ಸಿದ್ದಲಿಂಗಪ್ಪ

Jan 15 2024, 01:46 AM IST
ಇತ್ತೀಚೆಗೆ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿತ್ತು. ಗೋಷ್ಠಿಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಮ್ಮೇಳನದ ಏಕತಾನತೆಯನ್ನು ವೈವಿಧ್ಯಮಯಗೊಳಿಸಲಾಗಿತ್ತು. ಸಮ್ಮೇಳನದ ಖರ್ಚು,ವೆಚ್ಚವನ್ನು ಪತ್ರಿಕೆಗಳಿಗೆ ಪ್ರಕಟಣೆ ನಿಡುವ ಮೂಲಕ ಬಹಿರಂಗಪಡಿಸಿದ್ದ ಜಿಲ್ಲಾ ಕಸಾಪದ ಕಾರ್ಯ ಅಭಿನಂದನೀಯ.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ.ಆಂಜಿನಪ್ಪ ಆಯ್ಕೆ

Jan 12 2024, 01:45 AM IST
ಹೊಸಕೋಟೆ: ಜನವರಿ 21 ಹಾಗೂ 22ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಜಿಲ್ಲಾ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ಆಂಜನಪ್ಪ ಅವರನ್ನು ತಾಲೂಕಿನ ನಂದಗುಡಿ ಹೋಬಳಿ ಕಸಾಪ ಅಧ್ಯಕ್ಷ ತರಬಹಳ್ಳಿ ಹರೀಶ್, ಸೂಲಿಬೆಲೆ ಹೋಬಳಿ ಕಸಾಪ ನಿಕಟಪೂರ್ವ ಅಧ್ಯಕ್ಷ ಎಂ.ಆರ್. ಉಮೇಶ್, ಕಸಾಪ ನಿಕಟಪೂರ್ವ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸೂಲಿಬೆಲೆ ಮಂಜುನಾಥ್, ಕಸಾಪ ಸದಸ್ಯ ಬೆಟ್ಟಹಳ್ಳಿ ಅಂಜಿನಪ್ಪ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಅಭಿನಂದಿಸಿದರು.

ಕಲೆ ಸಾಹಿತ್ಯ ಸಂಗೀತದ ತಾಯಿ ಬೇರು ಜಾನಪದ: ಜಿ.ಬಿ.ಸುರೇಶ್

Jan 11 2024, 01:30 AM IST
ಎಲ್ಲಾ ಭಾರತೀಯರ ಸಂಸ್ಕೃತಿ, ಕಲೆ, ಸಾಹಿತ್ಯ ಸಂಗೀತದ ತಾಯಿ ಬೇರು ಜಾನಪದ ಕಲೆ, ಸಾಹಿತ್ಯ, ಸಂಗೀತವೇ ಆಗಿದೆ ಎಂದು ಲಕ್ಕವಳ್ಳಿಯ ಗಣಪತಿ ಸಮುದಾಯ ಭವನದಲ್ಲಿ ತರೀಕೆರೆ ತಾಲೂಕು ಕರ್ನಾಟಕ ಜಾನಪದ ಪರಿಷತ್‌ ನಿಂದ ತರೀಕೆರೆ ತಾಲೂಕು ಮಟ್ಟದ ಜಾನಪದ ಸಮ್ಮೇಳನ ಹಮ್ಮಿಕೊಳ್ಳಲು ಏರ್ಪಡಸಿದ್ದ ಪೂರ್ವಬಾವಿ ಸಭೆಯಲ್ಲಿ ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಹೇಳಿದ್ದಾರೆ.

ವಿಶ್ವದಾದ್ಯಂತ ಕನ್ನಡ ಸಾಹಿತ್ಯ ಸಂಸ್ಕೃತಿಯ ಬೆಳಕು: ಎನ್. ಶಿವಮೂರ್ತಿ

Jan 11 2024, 01:30 AM IST
ಕನ್ನಡ ಭಾಷೆ ಬೆಳವಣಿಗೆ ಹಾಗೂ ಕರ್ನಾಟಕದ ಒಗ್ಗೂಡುವಿಕೆಗೆ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪಿಸಲಾಯಿತು ಎಂದು ತಾಲೂಕು ಕಸಾಪ ಅಧ್ಯಕ್ಷ ಎನ್.ಶಿವಮೂರ್ತಿ ಹೇಳಿದರು.

ಹೊನ್ನಾಪುರಮಠ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ: ಡಾ. ವಿಕ್ರಮ ವಿಸಾಜಿ

Jan 09 2024, 02:00 AM IST
ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಗದಿಗೆಯ್ಯಾ ಹೊನ್ನಾಪುರಮಠ ದತ್ತಿ ಅಂಗವಾಗಿ ‘ಕನ್ನಡ ಸಾಹಿತ್ಯದ ಇತ್ತೀಚಿನ ಸ್ವರೂಪ’ ವಿಷಯ ಕುರಿತು ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥ ಡಾ. ವಿಕ್ರಮ ವಿಸಾಜಿ ಉಪನ್ಯಾಸ ನೀಡಿದರು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • 104
  • 105
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved