ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸತತ ಎರಡು ದಶಕಕ್ಕೂ ಹೆಚ್ಚಿನ ಕಾಲ ಸಶಸ್ತ್ರವಾಗಿ ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿದ್ದ 6 ಮಂದಿ ನಕ್ಸಲೀಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬುಧವಾರ ಶರಣಾದರು.
ಹ್ಯೂಮನ್ ಮೆಟಾನ್ಯೂಮೋ ವೈರಸ್ (ಎಚ್ಎಂಪಿವಿ) ಮಾರಣಾಂತಿಕ ಅಥವಾ ಅಪಾಯಕಾರಿ ಅಲ್ಲ ಎಂದು ಈಗಾಗಲೇ ಕೇಂದ್ರ ಸರ್ಕಾರ, ಆರೋಗ್ಯ ತಜ್ಞರು ಹೇಳಿರುವುದರಿಂದ ಈ ಬಗ್ಗೆ ಜನ ಆತಂಕಗೊಳ್ಳದಂತೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 40 ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿದ್ದು ನಾನಲ್ಲ. ಅಂದಿನ ಗುತ್ತಿಗೆದಾರರ ಸಂಘಧ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ವಿಮಾನ ನಿಲ್ದಾಣ ಮೊದಲ ಹಂತದ ವಿಸ್ತರಣೆಗಾಗಿ ಭೂಮಿ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ.
ಮುಖ್ಯಮಂತ್ರಿಯಾಗಿ 2ನೇ ಅವಧಿಯಲ್ಲೂ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಇನ್ನೂ ಮೂರೂವರೆ ವರ್ಷ ಅವರೇ ಸಿಎಂ ಆಗಿ ಮುಂದುವರಿಯಲಿ ಎಂದು ಸಚಿವ ಬೈರತಿ ಸುರೇಶ್ ಹೇಳಿದರು.
ಬಹುತೇಕ ಮೀನುಗಾರಿಕೆಯನ್ನೇ ನಂಬಿರುವ ಅತ್ಯಂತ ಹಿಂದುಳಿದ ಮೊಗವೀರ ಸಮುದಾಯವನ್ನು ಪರಿಶಿಷ್ಟ ಜಾತಿ ಎಂದು ಪರಿಗಣಿಸುವಂತೆ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರತಿಯೊಂದು ಮನೆಯಲ್ಲೂ ಒಂದು ಕಲಾಕೃತಿ ಇದ್ದರೆ ಅದು ಮನೆಯ ಅಂದ ಚೆಂದ ಹೆಚ್ಚಿಸುತ್ತದೆ. ಜೊತೆಗೆ ಕಲಾವಿದರನ್ನು ಬೆಂಬಲಿಸುವ ದೃಷ್ಟಿಯಿಂದಲೂ ಕಲಾಸಕ್ತರು ಹೆಚ್ಚಿನ ಕಲಾಕೃತಿಯನ್ನು ಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.