ರಾಜ್ಯದ ಒಟ್ಟು ಬಜೆಟ್ನ ಶೇ.10 ರಷ್ಟು ಹಣ ಯುಕೆಪಿಗೆ ಮೀಸಲಿಡಿ
Aug 21 2024, 12:37 AM ISTಸರ್ಕಾರಕ್ಕೆ ನಿಜವಾಗಿಯೂ ಉತ್ತರ ಕರ್ನಾಟಕದ ಬಗ್ಗೆ ಕಾಳಜಿ ಇದ್ದರೇ ಹಾಗೂ 2023ರ ಚುನಾವಣೆಯಲ್ಲಿ ವಿಜಯಪುರದಲ್ಲಿ ಯುಕೆಪಿ ಸಮಾವೇಶ ಮಾಡಿ 5 ವರ್ಷದ ಅವಧಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ನೀಡಿರುವ ಭರವಸೆ ಪೂರ್ಣಗೊಳಿಸಲು ರಾಜ್ಯದ ಒಟ್ಟು ಬಜೆಟ್ನ ಶೇ.10 ರಷ್ಟು ಹಣವನ್ನು ಕೃಷ್ಣಾ ಮೇಲ್ದಂಡೆ ಯೋಜನೆಗೆ ವೆಚ್ಚ ಮಾಡಲು ವಿಶೇಷ ಅಧಿವೇಶನ ಕರೆದು ಕೈಗೊಳ್ಳಬೇಕು ಎಂದು ಬಾಗಿನ ಅರ್ಪಿಸಲು ಬರುತ್ತಿರುವ ಸಿಎಂ ಸಿದ್ದರಾಮಯ್ಯನವರಿಗೆ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆಯ ಸಂಚಾಲಕ ಪ್ರಕಾಶ ಅಂತರಗೊಂಡ ಒತ್ತಾಯಿಸಿದ್ದಾರೆ.