ಹಣ ಕೊಟ್ಟರೆ ಟಿಸಿ ಬದಲು, ಇಲ್ಲದಿದ್ದರೆ ಎಲ್‌ಟಿ!

Jun 25 2024, 12:49 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬಡ ಹಾಗೂ ಸಣ್ಣ ಹಿಡುವಳಿ ರೈತರಿಗೆ ಅನುಕೂಲವಾಗಲೆಂದು ಸರ್ಕಾರ ವಿವಿಧ ಯೋಜನೆಗಳಲ್ಲಿ ಬೋರ್‌ವೆಲ್ ಹಾಗೂ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ಕೊಡುತ್ತಿದೆ. ಆದರೆ, ಇದನ್ನು ಕಲ್ಪಿಸಬೇಕಿರುವ ಹೆಸ್ಕಾಂ ಮಾತ್ರ ಉಚಿತವಾಗಿ ರೈತರಿಗೆ ನೀಡದೇ ಇದರಲ್ಲೂ ಭಷ್ಟಚಾರ ನಡೆಸುತ್ತಿದೆ. ಹೊಸ ಟಿಸಿ (ವಿದ್ಯುತ್ ಟ್ರಾನ್ಸಫಾರ್ಮರ್‌) ಕೊಡಲು, ಕೆಟ್ಟಿರುವ ಟಿಸಿ ರಿಪೇರಿ ಮಾಡಿಸಿಕೊಡಲು ಕೆಲವು ಕಡೆಗಳಲ್ಲಿ ಹಣ ಸುಲಿಗೆ ಮಾಡಲಾಗುತ್ತಿದೆ. ಸಾಕಷ್ಟು ಬಾರಿ ಎಚ್ಚರಿಸಿದರೂ ರೈತರಿಂದ ಹಣ ಪಡೆಯುವುದು ನಿಂತಿಲ್ಲ. ಈ ಕುರಿತು ಕೆಡಿಪಿ ಸಭೆಯಲ್ಲೇ ಸ್ವತಃ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.