ಬಂಡಿಪುರ ಹುಲಿ ಸಂರಕ್ಷಿತಾರಣ್ಯ ಮಾರ್ಗವಾಗಿ ಕೇರಳಕ್ಕೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅನುಮತಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದಕ್ಕೆ ವನ್ಯಜೀವಿ ತಜ್ಞರು, ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.