ತರಕಾರಿ - ಹಣ್ಣು ತುಂಬಿದ್ದ ಲಾರಿ ಕಂದಕಕ್ಕೆ ಉರುಳಿ ಸಂಭವಿಸಿದ ದುರ್ಘಟನೆಯಲ್ಲಿ 10 ಜನರು ಮೃತಪಟ್ಟು, 19 ಜನರು ಗಾಯಗೊಂಡ ಘಟನೆ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ಬೆಳಗಿನ ಜಾವ ನಡೆದಿದೆ.
ಕಳೆದ ತಿಂಗಳ ಡಿ.21ರಂದು ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ್ದ ಉದ್ಯಮಿ ಚಂದ್ರಮ್ ಅವರ ಕಾರು ಅಪಘಾತ ಮಾಸುವ ಮುನ್ನವೇ ಸೋಮವಾರ ಬೆಳಗ್ಗೆ ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ.