ಬಿಜೆಪಿಯಲ್ಲಿ ಒಮ್ಮೆ ಅಭ್ಯರ್ಥಿ ಘೋಷಿಸಿದ ಬಳಿಕ ಬದಲಾವಣೆ ಪ್ರಶ್ನೆಯೇ ಇಲ್ಲ. ಹಿಂದೆಂದೂ ಪ್ರಕಟಿತ ಅಭ್ಯರ್ಥಿ ಬದಲಾಯಿಸಿದ ಉದಾಹರಣೆಗಳಿಲ್ಲ. ಈ ವಿಚಾರದಲ್ಲಿ ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ ಎಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಈ.ಸಿ. ನಿಂಗರಾಜ್ ಗೌಡ ತಿಳಿಸಿದರು.
ನೈಋತ್ಯ ಪದವೀಧರ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಧನಂಜಯ್ ಸರ್ಜಿ ಅವರಿಗೆ ಟಿಕೆಟ್ ನೀಡಿದ್ದು ಸ್ಪರ್ಧೆ ಖಚಿತವಾಗಿದೆ.