ಅರಣ್ಯ ಇಲಾಖೆಯಿಂದ ಮನೆ ತೆರವು ಖಂಡಿಸಿ ಪ್ರತಿಭಟನೆ
Jul 19 2025, 01:00 AM ISTಕಾನೂನು ಬಾಹಿರವಾಗಿ ವ್ಯಕ್ತಿಯೊಬ್ಬರ ಮನೆಯನ್ನು ನೆಲಸಮ ಮಾಡಿರುವ ಯಸಳೂರು ವಲಯ ಅರಣ್ಯಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಯಸಳೂರು ವಲಯ ಅರಣ್ಯಾಧಿಕಾರಿ ಅವರು ಈ ಮನೆವನ್ನು ಸಂಪೂರ್ಣ ನಾಶಪಡಿಸಿದ್ದು ಅಲ್ಲದೆ, ಶೋಭರಾಜು ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.