ಕರ್ನಾಟಕದಲ್ಲಿ ತಲಾ ಆದಾಯ ಹೆಚ್ಚಲು ಗ್ಯಾರಂಟಿಗಳು ಕಾರಣ

Jul 27 2025, 12:00 AM IST
ಇತ್ತೀಚಿನ ವರದಿ ಪ್ರಕಾರ ಇಡೀ ದೇಶದಲ್ಲಿ ತಲಾ ಆದಾಯ ಹೆಚ್ಚಳದಲ್ಲಿ ಕರ್ನಾಟಕ ನಂಬರ್‌ ಒನ್‌ ಸ್ಥಾನದಲ್ಲಿದೆ. ಇದಕ್ಕೆ ನಮ್ಮ ಪಂಚ ಗ್ಯಾರಂಟಿಗಳೇ ಕಾರಣ. ಗ್ಯಾರಂಟಿಗಳಿಂದಾಗಿ ಜನರ ಬಳಿ ದುಡ್ಡು ಓಡಾಡುತ್ತಿದೆ. ಇದರಿಂದ ಸರ್ಕಾರಕ್ಕೂ ಆದಾಯ ಬರುತ್ತಿದೆ. ಇದರಿಂದ ಅಭಿವೃದ್ಧಿಯೂ ಆಗುತ್ತಿದೆ. ಆದರೆ, ಎಕನಾಮಿಕ್ಸಲ್ಲಿ ವೀಕ್‌ ಇರುವ ಬಿಜೆಪಿಯವರಿಗೆ ಇದೆಲ್ಲಾ ಎಲ್ಲಿ ಅರ್ಥವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಶಿವಲಿಂಗೇಗೌಡರು ಜನಪ್ರಿಯ ಶಾಸಕರಾಗದಿದ್ದರೆ ಇಷ್ಟೊಂದು ಜನ ಸೇರುತ್ತಿರಲಿಲ್ಲ. ಅವರು ಬಡವರ ಪರ, ಕ್ಷೇತ್ರದ ಪರ ಕೆಲಸ ಮಾಡುತ್ತಿರುವ ಹಿನ್ನೆಲೆಯಲ್ಲಿ ಜನ ಅವರ ಪರವಾಗಿದ್ದಾರೆ. ಶಿವಲಿಂಗೇಗೌಡ್ರು ಈ ಕ್ಷೇತ್ರದಲ್ಲಿ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಮುಂಬರುವ ಚುನಾವಣೆಯಲ್ಲಿಯೂ ಅವರೇ ಗೆದ್ದು ಬರುತ್ತಾರೆ ಅನ್ನೊ ನಂಬಿಕೆ ಇದೆ ಎಂದರು.