ಗ್ಯಾರಂಟಿಗಳಿಂದ ಜನರ ಆರ್ಥಿಕ ಶಕ್ತಿ ವೃದ್ಧಿ

Oct 17 2024, 12:01 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಾಲೂಕಿನ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸುವ ಸಲುವಾಗಿ ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ನಡೆಸುವ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗಿದೆ. ಜೊತೆಗೆ ೫ ಗ್ಯಾರಂಟಿ ಯೋಜನೆಗಳ ಪೈಕಿ ೧ಯೋಜನೆಯ ಸುಮಾರು ೧೦೦ ಫಲಾನುಭವಿಗಳನ್ನು ಭೇಟಿ ಮಾಡುವ ಮೂಲಕ ಯೋಜನೆ ಸಮರ್ಪಕವಾಗಿ ತಲುಪುತ್ತಿರುವ ಮಾಹಿತಿ ಪಡೆಯುವ ಮೂಲಕ ಯೋಜನೆಯಿಂದಾಗಿರುವ ಅನುಕೂಲಗಳನ್ನು ಫಲಾನುಭವಿಗಳ ಮುಖಾಂತರ ಪಡೆಯಲಾಗುತ್ತದೆ ಎಂದು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆಯು ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ಎಲ್.ಪಿ.ಪ್ರಕಾಶ್ ಗೌಡ ತಿಳಿಸಿದರು.