• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ 8 ಸ್ಥಾನ ಗೆಲ್ಲುತ್ತದೆಂದರೆ ಆಶ್ಚರ್ಯ: ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ

Jun 04 2024, 12:32 AM IST
ಯಾವ ಸಮೀಕ್ಷೆಗಳು ಬೇಡ, ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ. ಚುನಾವಣೆ ಎಂಬುದು ನಿಮಿತ್ತ ಮಾತ್ರ. ಮೋದಿಯವರು ಜನರ ಹೃದಯ ಗೆದ್ದಿದ್ದಾರೆ. ಸಮೀಕ್ಷೆ ಇದಕ್ಕೆ ಇಂಬುಕೊಟ್ಟಿದೆ ಅಷ್ಟೇ ಎಂದರು. ಕಾಂಗ್ರೆಸ್‍ನವರ ಟೀಕೆಗೆ ಉತ್ತರ ಕೊಡಬೇಕಾಗಿಲ್ಲ. ಜೂ.4ರವರೆಗೂ ಅವರು ಕಾಂಗ್ರೆಸೇ ಅಧಿಕಾರಕ್ಕೆ ಬರುತ್ತೇ ಎಂದು ಹೇಳುತ್ತಲೇ ಇರುತ್ತಾರೆ. ಒಂದು ವೇಳೆ ಸೋತರೆ ಇವಿಎಂ ಮಿಷನ್ ಮೇಲೆ ಆರೋಪ ಹೊರಿಸುತ್ತಾರೆ.

ಜಾನಪದ ತಜ್ಞ ಡಾ. ಎಂ.ಜಿ. ಈಶ್ವರಪ್ಪ ನಿಧನ

Jun 02 2024, 01:45 AM IST
ಜನಪದ ವಿದ್ವಾಂಸ, ಬಾಪೂಜಿ ವಿದ್ಯಾಸಂಸ್ಥೆ ಶೈಕ್ಷಣಿಕ ನಿರ್ದೇಶಕ ಹಾಗೂ ನಿವೃತ್ತ ಪ್ರಾಚಾರ್ಯ, ಜಾನಪದ ತಜ್ಞ ಡಾ. ಎಂ.ಜಿ. ಈಶ್ವರಪ್ಪ ಅವರು ಶನಿವಾರ ಶ್ವಾಸಕೋಶ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಪತ್ನಿ ಬಸಮ್ಮ, ಪುತ್ರ, ಪುತ್ರಿ ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ಜೂ.2ರ ಭಾನುವಾರ ದಾವಣಗೆರೆಯಲ್ಲಿ ನಡೆಯಲಿದೆ.

ಚಂದ್ರಶೇಖರನ್‌ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಿ: ಈಶ್ವರಪ್ಪ

Jun 01 2024, 01:45 AM IST

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸಬೇಕು. ಜೊತೆಗೆ ಇಲಾಖೆಯ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದರು.

ಉಚ್ಛಾಟನೆಗೆ ಬಿಜೆಪಿಯಲ್ಲಿ ಏನೂ ಬೆಲೆ ಇಲ್ಲ: ಕೆ.ಎಸ್‌. ಈಶ್ವರಪ್ಪ

May 31 2024, 02:15 AM IST
ಚಿಕ್ಕಮಗಳೂರು, ಉಚ್ಛಾಟನೆಗೆ ಬಿಜೆಪಿಯಲ್ಲಿ ಏನೂ ಬೆಲೆ ಇಲ್ಲ. ಕಾಂಗ್ರೆಸ್‌ ಸಂಸ್ಕೃತಿ ಬಿಜೆಪಿಯಲ್ಲೂ ಪಾಲನೆ ಆಗ್ತಾ ಇದೆ. ಪಕ್ಷವನ್ನು ಶುದ್ಧೀಕರಣ ಮಾಡುವ ಉದ್ದೇಶ ಹೊಂದಲಾಗಿದೆ. ಇದಕ್ಕೆ ಪ್ರತಿಯೊಬ್ಬ ಕಾರ್ಯಕರ್ತರು ಸಹಕರಿಸಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಕರೆ ನೀಡಿದರು.

ಡಾ.ಧನಂಜಯ ಸರ್ಜಿ ‘ಗುಂಡು’ ಪಾರ್ಟಿ ಬಿಜೆಪಿ ಆಶಯಕ್ಕೇ ಧಕ್ಕೆ: ಕೆ.ಎಸ್.ಈಶ್ವರಪ್ಪ

May 30 2024, 12:50 AM IST
ಡಾ. ಧನಂಜಯ ಸರ್ಜಿ ನೀಡಿದ ಗುಂಡು ಪಾರ್ಟಿಯಲ್ಲಿ ಪಾಲ್ಗೊಂಡವರೇ ಮಾರನೇ ದಿನ ನನಗೆ ಕರೆ ಮಾಡಿ ಈ ವಿಷಯ ತಿಳಿಸಿದ್ದು, ತಾವೆಲ್ಲರೂ ರಘುಪತಿ ಭಟ್ ಗೇ ಮತ ಹಾಕುವುದಾಗಿಯೂ ತಿಳಿಸಿದ್ದಾರೆ. ಒಟ್ಟಾರೆ ಬಿಜೆಪಿಯ ಶೇ. 70-80 ರಷ್ಟು ಮಂದಿ ರಘುಪತಿ ಭಟ್ ಗೆ ಮತ ಹಾಕಲಿದ್ದು, ಭಟ್ಟರು ಭಾರೀ ಬಹುಮತದಿಂದ ಗೆಲ್ಲಲಿದ್ದಾರೆ. ಯಾರು ಕೆಜೆಪಿಯಲ್ಲಿದ್ದರೋ ಅವರು ಮಾತ್ರ ಡಾ.ಧನಂಜಯ ಸರ್ಜಿಯವರಿಗೆ ಮತ ಹಾಕಲಿದ್ದಾರೆ.

ಬಿಜೆಪಿ ರಾಷ್ಟ್ರೀಯವಾದದಿಂದ ಜಾತಿವಾದಕ್ಕೆ ತಿರುಗಿದೆ: ಈಶ್ವರಪ್ಪ

May 29 2024, 12:53 AM IST
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ರಾಜ್ಯದ ಬಿಜೆಪಿ ಈಗ ರಾಷ್ಟ್ರೀಯವಾದದಿಂದ ಲಿಂಗಾಯತ ಜಾತೀಯವಾದದ ಕಡೆ ತಿರುಗುತ್ತಿದೆ. ಯಡಿಯೂರಪ್ಪ, ವಿಜಯೇಂದ್ರ ಹಿಂದೆ ಸುತ್ತುವವರಿಗೆ ಪಕ್ಷದಲ್ಲಿ ನೆಲೆ ಸಿಗುತ್ತಿದೆ. ಜನಸಂಘದ, ಆರ್.ಎಸ್.ಎಸ್. ತಪಸ್ಸು ಈ ಕುಟುಂಬಕ್ಕೆ ಬಲಿಯಾಗಿದೆ ಎಂದು ಆರೋಪಿಸಿದರು.

ಕುಟುಂಬ ರಾಜಕಾರಣದಿಂದ ಬಿಜೆಪಿ ಶುದ್ಧೀಕರಣಗೊಳಿಸಿ: ಮಾಜಿ ಸಚಿವ ಈಶ್ವರಪ್ಪ

May 29 2024, 12:52 AM IST
ಕೇಂದ್ರ ನಾಯಕರೂ ಕೂಡ ಬಿಎಸ್‌ವೈ ಬಿಟ್ಟರೆ ಬೇರೆ ಯಾರೂ ಕರ್ನಾಟಕದಲ್ಲಿ ಇಲ್ಲ ಎನ್ನುವ ಭ್ರಮೆಯಲ್ಲಿ ಇದ್ದಾರೆ. ಇದನ್ನು ಸರಿಪಡಿಸಬೇಕಾದರೆ, ಬಿಜೆಪಿಗಾಗಿ ಜೀವನ ಸವೆಸಿದ ರಘುಪತಿ ಭಟ್‌ ಅಂತಹವರನ್ನು ಪರಿಷತ್‌ ಚುನಾವಣೆಯಲ್ಲಿ ಆರಿಸಬೇಕು. ಆಗ ಮಾತ್ರ ರಾಜ್ಯ ಬಿಜೆಪಿಯನ್ನು ಪೂರ್ತಿಯಾಗಿ ಶುದ್ಧೀಕರಣ ಮಾಡಲು ಸಾಧ್ಯವಿದೆ ಎಂದು ಈಶ್ವರಪ್ಪ ಪ್ರತಿಪಾದಿಸಿದರು.

ಮಂಗಳೂರು ಪಾಕಿಸ್ತಾನದಲ್ಲಿಲ್ಲ: ಕೆ.ಎಸ್.ಈಶ್ವರಪ್ಪ

May 29 2024, 12:46 AM IST
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂಧರು ನಮ್ಮ ಸರ್ಕಾರ, ಟಿಪ್ಪು ಸುಲ್ತಾನ್‌ನ ರಾಜ್ಯ ಎನ್ನುತ್ತಿದ್ದಾರೆ. ಹೀಗೆ ಬಿಟ್ಟರೆ ಅವರು ಹಿಂದುಗಳ ಮನೆಗೂ ಬಂದು ನಮಾಜ್ ಮಾಡುತ್ತಾರೆ. ರಾಜ್ಯದಲ್ಲಿ ಪೊಲೀಸ್ ಇಲಾಖೆ ಬದುಕಿದೆಯೋ ಸತ್ತಿದೆಯೋ ಗೊತ್ತಾಗುತ್ತಿಲ್ಲ ಎಂದವರು ಹೇಳಿದರು.

ಮತ್ತೆ ‘ರಾಯಣ್ಣ ಬ್ರಿಗೇಡ್‌’ ಕಟ್ಟಲು ಚಿಂತನೆ: ಈಶ್ವರಪ್ಪ

May 27 2024, 05:14 AM IST

ಲೋಕಸಭಾ ಚುನಾವಣೆ ಮುಗಿದ ಬಳಿಕ ಮತ್ತೆ ರಾಯಣ್ಣ ಬ್ರಿಗೇಡ್ ಆರಂಭಿಸುವ ಕುರಿತು ತೀರ್ಮಾನಿಸುವೆ ಎಂದು ಮಾಜಿ ಡಿಸಿಎಂ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ರಾಯಣ್ಣ ಬ್ರಿಗೇಡ್ ಆರಂಭಿಸುವ ಸೂಚನೆ ನೀಡಿದ ಮಾಜಿ ಸಚಿವ ಈಶ್ವರಪ್ಪ

May 27 2024, 01:04 AM IST
ಬಿಜೆಪಿಯಿಂದ ಉಚ್ಚಾಟನೆಗೊಂಡು ರಾಜಕೀಯವಾಗಿ ಅತಂತ್ರವಾಗಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮತ್ತೆ ಪ್ರವರ್ಧಮಾನಕ್ಕೆ ಬರಲು ತಮ್ಮ ಹಳೆಯ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ. ಚುನಾವಣೆ ಮುಗಿದ ಬಳಿಕ ಮತ್ತೆ ರಾಯಣ್ಣ ಬ್ರಿಗೇಡ್ ಚಟುವಟಿಕೆ ಆರಂಭಿಸುವ ಸುಳಿವು ನೀಡಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 23
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved