ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಂಡಾಯ ಸಾರಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಮುನಿಸು ಶಮನ ಮಾಡುವಲ್ಲಿ ಪಕ್ಷದ ನಾಯಕರು ಯಶಸ್ವಿಯಾಗಿದ್ದಾರೆ. ಆದರೆ, ಕ್ಷೇತ್ರದಲ್ಲಿ ಅಸಮಾಧಾನ ಹೊಗೆಯಾಡುತ್ತಲೇ ಇದೆ.
ರಾಜಕೀಯವೇ ಉಸಿರಾಗಿರುವ ಬೊಂಬೆನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಸ್ಟಾರ್ ವಾರ್ ಮಾತ್ರವಲ್ಲ ರಾಜಕೀಯವಾಗಿ ಬದ್ಧವೈರಿಯಾಗಿರುವ ಎರಡು ಕುಟುಂಬಗಳ ನಡುವಿನ ಕದನವಾಗಿಯೂ ಮಾರ್ಪಟ್ಟಿದೆ.
ಕಾಂಗ್ರೆಸ್ನಲ್ಲಿ ಬಂಡಾಯ ಸ್ಫೋಟಗೊಂಡಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್ ಖಾದ್ರಿ ಅವರು ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದು, ನಾಮಪತ್ರ ಸಲ್ಲಿಕೆಯ ಗಡುವಿಗೆ 10 ನಿಮಿಷಗಳಿರುವಾಗ ಬೈಕ್ನಲ್ಲಿ ಬಂದು, ನಾಮಪತ್ರ ಸಲ್ಲಿಸುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ.
ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರ ಜೆಡಿಎಸ್-ಬಿಜೆಪಿ ಮೈತ್ರಿಕೂಟಕ್ಕೆ ಕಬ್ಬಿಣದ ಕಡಲೆಯಾಗಿದ್ದು, ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಬಂಡಾಯದ ಕಾರಣ ಕೇಸರಿ ಪಕ್ಷವು ತನ್ನ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ ಕ್ಷೀಣಿಸಿದೆ.