ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅತ್ಯಾಚಾರ, ಸುಲಿಗೆ, ಕೊಲೆ, ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಎಲ್ಲಾ ಜೈಲುಗಳು ರೆಸಾರ್ಟ್ ಆಗಿವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಎಚ್.ಡಿ.ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಹಾಗೂ ಮುರುಗೇಶ್ ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಮನವಿ ಶೀಘ್ರವಾಗಿ ಇತ್ಯರ್ಥಪಡಿಸುವಂತೆ ರಾಜ್ಯಪಾಲರಿಗೆ ಸಲಹೆ ನೀಡುವ ತೀರ್ಮಾನವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.