ಎಚ್.ಡಿ.ದೇವೇಗೌಡರು ರಾಷ್ಟ್ರ ಕಂಡ ಮಹಾನ್ ನಾಯಕರು: ಡಾ.ಕೆ.ಅನ್ನದಾನಿ
May 18 2025, 11:45 PM ISTಪ್ರಧಾನ ಮಂತ್ರಿಯಾಗಿ ರಾಜ್ಯ ಹಾಗೂ ದೇಶಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಅವಧಿಯಲ್ಲಿ ನೀರಾವರಿ ಕ್ಷೇತ್ರದಲ್ಲಿನ ಯೋಜನೆಗಳು ರೈತರಿಗೆ ಇಂದಿಗೂ ವರದಾನವಾಗಿವೆ. ರಾಜ್ಯ ಸೇರಿದಂತೆ ದೇಶಾದ್ಯಂತ ನೀರಾವರಿ ಯೋಜನೆಗಳಿಗೆ ಒತ್ತು ನೀಡುವುದರ ಜೊತೆಗೆ ರೈಲ್ವೆ, ನೀರಾವರಿ, ವಿದ್ಯುತ್, ಕೈಗಾರಿಕೆ, ಕೃಷಿ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ.