88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 68 ವರ್ಷಗಳ ಬಳಿಕ ಗಣಿನಾಡಿಗೆ ನುಡಿತೇರು ಎಳೆಯುವ ಅವಕಾಶ ಸಿಕ್ಕಂತಾಗಿದೆ.
ಸರ್ಕಾರದ ಶಕ್ತಿ ಯೋಜನೆ ಒಂದೆಡೆಯಾದರೆ, ಸಮ್ಮೇಳನಕ್ಕೆ ಬರುವವರಿಗೆ ಉಚಿತ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿದ್ದ ಹಿನ್ನೆಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 2ನೇ ದಿನ ಜನಸಾಗರವೇ ಹರಿದು ಬಂದಿತು.
ಅಖಿಲ ಭಾರತ ಕನ್ನಡ ಸಾಹಿತ್ಯ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ಗೊರುಚ ಅವರು ಕನ್ನಡ ಭಾಷೆಯನ್ನು ತಂತ್ರಜ್ಞಾನಕ್ಕೆ ಹೊಂದಿಸುವ ಅನಿವಾರ್ಯತೆ ಹಾಗೂ ತಂತ್ರಜ್ಞಾನದ ಜತೆ ಕನ್ನಡವನ್ನು ಜೋಡಿಸಿ ಸಶಕ್ತಗೊಳಿಸುವ ಕುರಿತು ನಾಲ್ಕು ಮಹತ್ವದ ಸಲಹೆಗಳನ್ನು ನೀಡಿದ್ದಾರೆ.
ಕನ್ನಡ ನೆಲದಲ್ಲಿ ಹುಟ್ಟಿ ಸಾಹಿತ್ಯ ಲೋಕವನ್ನು ಬೆಳಗಿದ ಆರ್.ನರಸಿಂಹಾಚಾರ್, ಬಿ.ಎಂ.ಶ್ರೀ, ಪು.ತಿ.ನರಸಿಂಹಾಚಾರ್, ಎ.ಎನ್.ಮೂರ್ತಿರಾವ್, ಕೆ.ಎಸ್.ನರಸಿಂಹಸ್ವಾಮಿ, ಡಾ.ಹೆಚ್.ಎಲ್.ನಾಗೇಗೌಡ, ಪ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸಮ್ಮೇಳನದ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆಗೆ ಗರಿ ಮೂಡಿಸಿದ್ದಾರೆ.
ಗೊ.ರು.ಚನ್ನಬಸಪ್ಪ ಅವರು ಆಗಮಿಸುತ್ತಿದ್ದಂತೆ ಪೂರ್ಣಕುಂಭದೊಂದಿಗೆ ನಾದಸ್ವರ, ಡೊಳ್ಳು ಕುಣಿತ, ಪೂಜಾ ಕುಣಿತ ಒಳಗೊಂಡಂತೆ ಜಾನಪದ ಕಲಾತಂಡಗಳಿಂದ ಬರಮಾಡಿಕೊಳ್ಳಲಾಯಿತು.